ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

Featured, ರಾಜ್ಯ ನ್ಯೂಸ್

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ಹಾಸನ: ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕು ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಈ ಮೂಲಕ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ಳುತ್ತಾರೆ ಎಂಬ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಗುರುವಾರ ಮಾತನಾಡಿದ ಅವರು, ಶತ್ರುಗಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಮಾಟ ಮಂತ್ರ ಮಾಡ್ತಾರಲ್ಲಾ ಅವುಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕಲ್ವಾ, ಅದಕ್ಕೆ ನಾನು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಹೇಳಿದರು.

ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರೇ ನಿಂಬೆಹಣ್ಣು ಇಟ್ಟುಕೊಂಡಿದ್ದಾರೆ. ಅಂತದ್ರಲ್ಲಿ ನಾನು ನಿಂಬೆಹಣ್ಣು ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಹಾಸನದ ವಿಮಾನ ನಿಲ್ದಾಣವನ್ನು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಜನರನ್ನು ಬಿಜೆಪಿಯವರು ಮತ ಕೇಳುತ್ತಾರೆ. ವ್ಯಾಪಾರ ಮಾಡುವಂತೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಹಾಸನ-ಬೇಲೂರು ರಸ್ತೆಗೆ ಅನುಮೋದನೆ ನೀಡಿ 800 ಕೋಟಿ ರೂ. ಹಣವನ್ನು ಸಮ್ಮಿಶ್ರ ಸರಕಾರದಲ್ಲಿ ಬಿಡುಗಡೆ ಮಾಡಿದ್ದೇವು. ಆದರೆ, ಬಿಳಿಕೆರೆಯಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಸರ್ಕಾರ ರದ್ದು ಮಾಡಿದೆ ಎಂದರು