Featured

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ಹಾಸನ: ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕು ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಈ ಮೂಲಕ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ಳುತ್ತಾರೆ ಎಂಬ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಗುರುವಾರ ಮಾತನಾಡಿದ ಅವರು, ಶತ್ರುಗಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಮಾಟ ಮಂತ್ರ ಮಾಡ್ತಾರಲ್ಲಾ ಅವುಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕಲ್ವಾ, ಅದಕ್ಕೆ ನಾನು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಹೇಳಿದರು.

ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರೇ ನಿಂಬೆಹಣ್ಣು ಇಟ್ಟುಕೊಂಡಿದ್ದಾರೆ. ಅಂತದ್ರಲ್ಲಿ ನಾನು ನಿಂಬೆಹಣ್ಣು ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಹಾಸನದ ವಿಮಾನ ನಿಲ್ದಾಣವನ್ನು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಜನರನ್ನು ಬಿಜೆಪಿಯವರು ಮತ ಕೇಳುತ್ತಾರೆ. ವ್ಯಾಪಾರ ಮಾಡುವಂತೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಹಾಸನ-ಬೇಲೂರು ರಸ್ತೆಗೆ ಅನುಮೋದನೆ ನೀಡಿ 800 ಕೋಟಿ ರೂ. ಹಣವನ್ನು ಸಮ್ಮಿಶ್ರ ಸರಕಾರದಲ್ಲಿ ಬಿಡುಗಡೆ ಮಾಡಿದ್ದೇವು. ಆದರೆ, ಬಿಳಿಕೆರೆಯಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಸರ್ಕಾರ ರದ್ದು ಮಾಡಿದೆ ಎಂದರು

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago