ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ ಸಮಾಜದ ವಿವಿಧ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ಸಮಾಜದಲ್ಲಿ ಸೌಹಾರ್ದ ನೆಲೆಸಬೇಕು, ಸಮಾಜದಲ್ಲಿ ಪ್ರತಿ ಜಾತಿಪ್ರತಿ ಧರ್ಮದವರು ಒಗ್ಗಟ್ಟಿನಲ್ಲಿ ಇರಬೇಕು, ಭವಿಷ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎಂಬ ನಿಟ್ಟಿನಲ್ಲಿ ರಾಜಕೀಯ ರಹಿತವಾಗಿ ಎಲ್ಲಾ ಪಕ್ಷಗಳ ಬಿಲ್ಲವ ಮುಖಂಡರು ಸೇರಿ ಮಾಡಿದ ನಿರ್ಣಯದ ಪ್ರಕಾರ ಬಿಲ್ಲವ ಮುಸ್ಲಿಂ ಸಾಮರಸ್ಯ ಸಮಾವೇಶದ ಆಯೋಜನೆ ಮಾಡಲಾಗಿದ್ದು ಇದರ ವಿರುದ್ಧ ಕೆಲವು ಸ್ಥಾಪಿತ ಹಿತಾಸಕ್ತಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಮೊಬೈಲ್ನಲ್ಲಿ ಅವಾಚ್ಯ ಶಬ್ದಗಳ ಮೂಲಕ ನಿಂದಿಸಿ ಮತ್ತು ಅವರಿಗೆ ಜೀವ ಬೆದರಿಕೆ ಹಾಕಿರುವುದು ಖಂಡನೀಯ ಹಾಗೂ ಇದೊಂದು ಹೇಡಿತನದ ಪರಮಾವಧಿ.
ಸುಸಂಸ್ಕತ ಸಮಾಜದಲ್ಲಿ ಮರ್ಯಾದೆಯಿಂದ, ನಾರಾಯಣ ಗುರುಗಳ ತತ್ವವನ್ನು ಅಳವಡಿಸಿಕೊಂಡು, ಕೋಟಿ ಚೆನ್ನಯರ ಸತ್ಯವನ್ನು ಪಾಲಿಸಿಕೊಂಡು ತಮ್ಮ ಜೀವನ ನಡೆಸುವ ಬಿಲ್ಲವರ ಒಗ್ಗಟ್ಟನ್ನು ಮುರಿದು ಸಮಾಜದಲ್ಲಿ ಅಶಾಂತಿಯನ್ನು ಹರಡುವ ಶಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ ಹಾಗೂ ಮುಂದಿನ ದಿನಗಳಲ್ಲಿ ಈ ಷಡ್ಯಂತ್ರ ಮಾಡುವ ಶಕ್ತಿಗಳು ಇದರ ಪರಿಣಾಮನ್ನು ಎದುರಿಸಲಿದ್ದಾರೆ ಎಂದು ಸದಾಶಿವ ಅಮೀನ್ಕಟ್ಟೆಗುಡ್ಡೆ, ಪ್ರಶಾಂತ್ ಪೂಜಾರಿ, ಸಾಯಿರಾಜ್ ಪೂಜಾರಿ, ತಾರಾನಾಥ ಸುವರ್ಣ, ಗಿರೀಶ್ಕುಮಾರ್ , ದಿವಾಕರ ಬೊಳ್ಜೆ, ಶೇಖರ್ ಕೋಟ್ಯಾನ್, ಚರಣ್ ವಿಠಲ್ ಕುದಿ, ಲಕ್ಷ್ಮಣ ಪೂಜಾರಿ, ದಿನೇಶ್ ಜತ್ತನ್, ಆನಂದ ಬಂಗೇರ, ಶಬರೀಶ್ ಪೂಜಾರಿ, ಮಲ್ಲಿಕಾ ಪೂಜಾರಿ, ಅಂಚನ್, ಭಾಸ್ಕರ್ ಕೋಟ್ಯಾನ್, ಮಿಥುನ್ ಅಮೀನ್, ಆರ್. ಕೆ. ರಮೇಶ್ ಪೂಜಾರಿ, ರಾಜೇಶ್ ಪಾಲನ್, ಧನ್ಪಾಲ್, ಸುಪ್ರೀತ್ ಸುವರ್ಣ, ವಿಜಯ ಪೂಜಾರಿ, ಸುರೇಂದ್ರ ಪೂಜಾರಿ ಮೊದಲಾದವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…