ಉಡುಪಿ: ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಹಿಳಾ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ದೆಹಲಿಯ ಮುಖ್ಯಮಂತ್ರಿ ಗಾದಿಗೆ ಅನೇಕ ಮಂದಿ ಘಟಾನುಘಟಿ ಶಾಸಕರು ಸಮರ್ಥರಾಗಿದ್ದರೂ, ಪಕ್ಷದ ಓರ್ವ ನೂತನ ಮಹಿಳಾ ಶಾಸಕಿಗೆ ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖರಿಗೆ ಅಭಿನಂದನೆಗಳು ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಜಾಲಾ ಸತೀಶ್, ತಾರಾ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…