Featured

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು – viswhanews24

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ಸಂಪೂರ್ಣ ರದ್ದು

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟವನ್ನ ಸಂಪೂರ್ಣ ರದ್ದುಗೊಳಿಸಿರುವುದಾಗಿ ಇಂಡಿಗೋ ಸಂಸ್ಥೆ ತಿಳಿಸಿದೆ.

ಇಂಡಿಗೋದಲ್ಲಿ ಉಂಟಾಗಿರುವ ಅಡಚಣೆ ಸತತ 5ನೇ ದಿನಕ್ಕೆ ಮುಂದುವೆರದಿದ್ದು, ಸಿಬ್ಬಂದಿ ರೋಸ್ಟರಿಂಗ್ ನಿಯಮಗಳು, ತಾಂತ್ರಿಕ ಸಮಸ್ಯೆ ಹಾಗೂ ಕಾರ್ಯಾಚರಣೆ ದೋಷಗಳಿಂದ ಇಂದು ಕೂಡ ನೂರಾರು ವಿಮಾನಗಳ ರದ್ದುಗೊಳಿಸಲಾಗಿದೆ. ಏಕಾಏಕಿ ವಿಮಾನ ರದ್ದಾದ ವಿಷಯ ತಿಳಿದ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರು ಹಾಗೂ ಏರ್‌ಪೋರ್ಟ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ.

ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾವಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮಧ್ಯರಾತ್ರಿ 11:59ರ ವರೆಗೆ ಎಲ್ಲಾ ಇಂಡಿಗೋ ದೇಶಿಯ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಅದಕ್ಕೆ ಮುಂಚಿತವಾಗಿ ಇಲ್ಲಿಂದ ನಿರ್ಗಮಿಸಬೇಕಿರುವ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಾರದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇಂಡಿಗೋ ಶುಕ್ರವಾರ ಒಂದೇ ದಿನ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ ಇತರ ಏರ್‌ಪೋರ್ಟ್‌ಗಳಿಂದ ಒಟ್ಟು 700 ವಿಮಾನಗಳ ಹಾರಾಟವನ್ನ ರದ್ದುಗೊಳಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago