ನವದೆಹಲಿ: ಕೊರೊನಾ ವೈರಸ್ ಸೋಂಕು ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸುವಂತೆ ಸರ್ಕಾರ ಬುಧವಾರ ಸೂಚಿಸಿದೆ.
ಮಕ್ಕಳಲ್ಲಿಯೂ ಸೋಂಕು ಹೆಚ್ಚಿದ್ದು ಶಾಲೆಗಳನ್ನು ಮುಚ್ಚುವ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳನ್ನು ನಡೆಸುವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಶಾಲೆ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದಿದೆ.
ಕಡ್ಡಾಯವಾಗಿ ಮಾಸ್ಕ್ ಬಳಕೆಗೆ ಸಂಬಂಧಿಸಿದಂತೆ ಸರ್ಕಾರವು ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸುವುದು ಹಾಗೂ ಹೆಚ್ಚಿನ ಜನ ಸೇರುವ ಕಡೆ ನಿಗಾವಹಿಸುವಂತೆ ಸೂಚಿಸಲಾಗಿದೆ.
ಮಂಗಳವಾರ ದೆಹಲಿಯಲ್ಲಿ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಶೇಕಡ 26ರಷ್ಟು ಏರಿಕೆಯಾಗಿದೆ. ಬುಧವಾರ 632 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇಕಡ 4.42ರಷ್ಟಿದೆ. ಸೋಮವಾರ ದೆಹಲಿಯಲ್ಲಿ 501 ಪ್ರಕರಣಗಳು ದಾಖಲಾಗಿದ್ದವು ಹಾಗೂ ಪಾಸಿಟಿವಿಟಿ ದರ ಶೇಕಡ 7.72ರಷ್ಟಿತ್ತು.
ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ 2,067 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 12,340ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…