ನವದೆಹಲಿ : ‘ಗಣರಾಜ್ಯೋತ್ಸವದಂದು ಕೆಲವು ಕಿಡಿಗೇಡಿಗಳು ಮಾಡಿದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ, ಆದರೆ ಅದಕ್ಕೆ ರೈತರು ಕಾರಣರಲ್ಲ. ಅವರಿಗೆ ಶಿಕ್ಷೆ ನೀಡಬಾರದು ಎಂದು ರಾಜ್ಯಸಭೆಯಲ್ಲಿ ಸದಸ್ಯ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಕಾಂಕ್ರೀಟ್ ಗೋಡೆಗಳನ್ನು ಹಾಕುವ ಕೇಂದ್ರದ ನಿರ್ಧಾರ ದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಸರ್ಕಾರ ಈ ವಿಷಯವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕು’ ಎಂದು ಜೆಡಿಎಸ್ ನ ಎಚ್ ಡಿ ದೇವೇಗೌಡ ಆಗ್ರಹಿಸಿದರು.
ಒಬ್ಬ ರೈತನಾಗಿ ನಾನು ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದು, ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸಬೇಕು ಎಂದು ಹೇಳಿದರು.
ಇನ್ನು ಕಾವೇರಿ ಹೋರಾಟದ ಬಗ್ಗೆ ಮಾತನಾಡಿದ ಅವರು ಕಾವೇರಿಗಾಗಿ ನಾವು ತಮಿಳುನಾಡು, ಕೇರಳ ಜೊತೆ ಹೋರಾಟ ಮಾಡುತ್ತಲೇ ಇದ್ದೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಹೆಚ್ಡಿಡಿ ಒತ್ತಾಯಿಸಿದ್ದಾರೆ.
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…