ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.
ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು. ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಹೊಟ್ಟೆಕಿಚ್ಚಿನ ಮಂದಿ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…