Featured

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೆಲದಿನಗಳಿಂದ ವಾಯು ಮಾಲಿನ್ಯ ಹೆಚ್ಚಳವಾಗುತ್ತಿದೆ. ಇಂದು ಬೆಳಗ್ಗೆ ದೆಹಲಿಯ ವಾಯು ಸೂಚ್ಯಂಕ ಪರೀಕ್ಷಿಸಿದಾಗ 362 ಕಂಡುಬಂದಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಈ ಗಾಳಿ ಉಸಿರಾಟಕ್ಕೆ ಅನರ್ಹವಾಗಿದೆ. ಇಂದು ಬೆಳಿಗ್ಗೆ ದೆಹಲಿ ವಾಯು ಸೂಚ್ಯಂಕ 362 ಕಂಡು ಬಂದಿದೆ. ವಾಯು ಸೂಚ್ಯಂಕ 200ಕ್ಕಿಂತ ಹೆಚ್ಚು ಇದ್ದರೆ ಉಸಿರಾಡಲು ಅನರ್ಹವಾಗಿರುತ್ತದೆ. ಹಾಗಾಗಿ ಇದೀಗ ದೆಹಲಿ ಜನ ವಾಯು ಮಾಲಿನ್ಯದಿಂದಾಗಿ ಮನೆಯಿಂದ ಹೊರ ಬರದಿರುವ ಸ್ಥಿತಿ ನಿರ್ಮಾಣವಾಗಿದೆ.

ವಾಯು ಮಾಲಿನ್ಯ ತಡೆಗಾಗಿ ನಿನ್ನೆ ಕೇಂದ್ರ ಸರ್ಕಾರ ನೇತೃತ್ವದಲ್ಲಿ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ವಾಯು ಗುಣಮಟ್ಟ ಆಯೋಗದ ಸೂಚನೆಯಂತೆ ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು ಎನ್ನಲಾಗಿದೆ. 11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30 ರವರೆಗೆ ಕೆಲಸ ಮಾಡಬೇಕು. ನವೆಂಬರ್ 31 ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ ಮಾಡಲಾಗಿದೆ.

ಇದರೊಂದಿಗೆ 10 ವರ್ಷಕ್ಕಿಂತ ಹಳೆಯ ಪೆಟ್ರೋಲ್ 15 ವರ್ಷಕ್ಕಿಂತ ಹಳೆ ಡೀಸೆಲ್ ವಾಹನ ನವೆಂಬರ್ 21 ರವರೆಗೆ ಸಂಚಾರ ಮಾಡಬಾರದು. ನವೆಂಬರ್ 21 ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ ಕೊಡಿ ಎಂದು ಸೂಚಿಸಿದ್ದು, ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದಲ್ಲದೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ನೀಡಲಾಗಿದೆ.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

4 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

4 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

4 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

5 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

8 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

8 hours ago