Featured

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೆಲದಿನಗಳಿಂದ ವಾಯು ಮಾಲಿನ್ಯ ಹೆಚ್ಚಳವಾಗುತ್ತಿದೆ. ಇಂದು ಬೆಳಗ್ಗೆ ದೆಹಲಿಯ ವಾಯು ಸೂಚ್ಯಂಕ ಪರೀಕ್ಷಿಸಿದಾಗ 362 ಕಂಡುಬಂದಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಈ ಗಾಳಿ ಉಸಿರಾಟಕ್ಕೆ ಅನರ್ಹವಾಗಿದೆ. ಇಂದು ಬೆಳಿಗ್ಗೆ ದೆಹಲಿ ವಾಯು ಸೂಚ್ಯಂಕ 362 ಕಂಡು ಬಂದಿದೆ. ವಾಯು ಸೂಚ್ಯಂಕ 200ಕ್ಕಿಂತ ಹೆಚ್ಚು ಇದ್ದರೆ ಉಸಿರಾಡಲು ಅನರ್ಹವಾಗಿರುತ್ತದೆ. ಹಾಗಾಗಿ ಇದೀಗ ದೆಹಲಿ ಜನ ವಾಯು ಮಾಲಿನ್ಯದಿಂದಾಗಿ ಮನೆಯಿಂದ ಹೊರ ಬರದಿರುವ ಸ್ಥಿತಿ ನಿರ್ಮಾಣವಾಗಿದೆ.

ವಾಯು ಮಾಲಿನ್ಯ ತಡೆಗಾಗಿ ನಿನ್ನೆ ಕೇಂದ್ರ ಸರ್ಕಾರ ನೇತೃತ್ವದಲ್ಲಿ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ವಾಯು ಗುಣಮಟ್ಟ ಆಯೋಗದ ಸೂಚನೆಯಂತೆ ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು ಎನ್ನಲಾಗಿದೆ. 11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30 ರವರೆಗೆ ಕೆಲಸ ಮಾಡಬೇಕು. ನವೆಂಬರ್ 31 ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ ಮಾಡಲಾಗಿದೆ.

ಇದರೊಂದಿಗೆ 10 ವರ್ಷಕ್ಕಿಂತ ಹಳೆಯ ಪೆಟ್ರೋಲ್ 15 ವರ್ಷಕ್ಕಿಂತ ಹಳೆ ಡೀಸೆಲ್ ವಾಹನ ನವೆಂಬರ್ 21 ರವರೆಗೆ ಸಂಚಾರ ಮಾಡಬಾರದು. ನವೆಂಬರ್ 21 ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ ಕೊಡಿ ಎಂದು ಸೂಚಿಸಿದ್ದು, ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದಲ್ಲದೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ನೀಡಲಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

29 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

41 minutes ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

7 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

7 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

7 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

7 hours ago