Featured

ದೆಹಲಿಯಲ್ಲಿ ವಿಪಕ್ಷಗಳ ಬೃಹತ್ ಸಮಾವೇಶ : ಮೋದಿ ಸರ್ಕಾರದ ವಿರುದ್ಧ ಒಂದಾದ ವಿಪಕ್ಷಗಳು.. – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಇಂದು ಜಂತರ್​​​ ಮಂತರ್ ​​ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದಾರೆ.
ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿದಂತೆ ಎಲ್ಲಾ ವಿಪಕ್ಷದ ನಾಯಕರು ಆಗಮಿಸಲಿದ್ದಾರೆ. ಅಲ್ಲದೇ ಈ ಬಾರಿ ಸಮಾವೇಶದ ಬೃಹತ್​​​ ರ‍್ಯಾಲಿಯನ್ನು ಸಿಎಂ ಅರವಿಂದ್​​ ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ದೇಶವನ್ನು ರಕ್ಷಿಸಲು​​​​​​ ಈ ಸಮಾವೇಶ ನಡೆಸುತ್ತಿದ್ದೇವೆ. ಸಂಯುಕ್ತ ಭಾರತ ಕಟ್ಟಲು ಮೈತ್ರಿಕೂಟ ಅತ್ಯಗತ್ಯ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲಿ ಕಾಂಗ್ರೆಸ್​​ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಎಲ್ಲದಕ್ಕೂ ಸಿದ್ದವಾಗಿದ್ದೇವೆ. ಈ ಬಾರಿ ಮೋದಿಯವರನ್ನು ಸೋಲಿಸಲು ಪಣತೊಟ್ಟಿದ್ದೇವೆ ಎಂದು ಸಿಎಂ ಮಮತಾ ಬ್ಯಾನರ್ಜಿಯವರು ಪತ್ರಿಕಾಗೋಷ್ಠಿ ನಡೆಸಿ  ತಿಳಿಸಿದ್ದಾರೆ
ಇನ್ನು ಎನ್​​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಇದರ ನಿಗದಿತ ಸಮಯ ಮುಗಿದಿದೆ. ಲೋಕಸಭೆ ಚುನಾವಣೆಯ ದಿನಾಂಕವೂ ಮುಂದಿನ 15 ದಿನಗಳಲ್ಲಿ ತಿಳಿಯಲಿದೆ. ಈ ಫ್ಯಾಸಿಸ್ಟ್​​ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ. ಇಲ್ಲಿಯೇ ಹೊಸ ಸರ್ಕಾರವೊಂದನ್ನು ರಚಿಸಲಿದ್ದೇವೆ. ದೇಶವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ಯಬೇಕು. ನಮ್ಮ ನೆಲದಲ್ಲಿ ಪ್ರಜಾಪ್ರಭುತ್ವ ಮತ್ತು ಸಮಗ್ರತೆ ಜೀವಂತವಾಗಿರಬೇಕು ಎಂದು ದೀದಿ ಹೇಳಿದ್ದಾರೆ.
Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago