Featured

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ – vishwanews24

ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ್, ಕಪಿಲ್ ಮಿಶ್ರಾ, ಆಶಿಶ್ ಸೂದ್ ಮತ್ತು ಪಂಕಜ್ ಸಿಂಗ್ ಅವರ ಹೆಸರುಗಳು ಸೇರಿವೆ. ಪ್ರವೇಶ್ ವರ್ಮಾ ಅವರು ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ.

ಕಪಿಲ್ ಮಿಶ್ರಾ ಕರವಾಲ್ ನಗರದಿಂದ ಶಾಸಕರಾಗಿದ್ದಾರೆ. ಮಂಜಿಂದರ್ ಸಿಂಗ್ ಸಿರ್ಸಾ ರಾಜೌರಿ ಗಾರ್ಡನ್ ಕ್ಷೇತ್ರದ ಶಾಸಕರು. ಆಶಿಶ್ ಸೂದ್ ಜನಕ್‌ಪುರಿಯ ಶಾಸಕರು. ಪಂಕಜ್ ಸಿಂಗ್ ವಿಕಾಸಪುರಿಯ ಶಾಸಕರು. ರವೀಂದ್ರ ಇಂದ್ರರಾಜ್ ಬವಾನದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ  ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

13 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

20 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

36 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

59 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago