ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರವೇಶ್ ವರ್ಮಾ, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದ್ರ ಇಂದ್ರರಾಜ್, ಕಪಿಲ್ ಮಿಶ್ರಾ, ಆಶಿಶ್ ಸೂದ್ ಮತ್ತು ಪಂಕಜ್ ಸಿಂಗ್ ಅವರ ಹೆಸರುಗಳು ಸೇರಿವೆ. ಪ್ರವೇಶ್ ವರ್ಮಾ ಅವರು ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ.
ಕಪಿಲ್ ಮಿಶ್ರಾ ಕರವಾಲ್ ನಗರದಿಂದ ಶಾಸಕರಾಗಿದ್ದಾರೆ. ಮಂಜಿಂದರ್ ಸಿಂಗ್ ಸಿರ್ಸಾ ರಾಜೌರಿ ಗಾರ್ಡನ್ ಕ್ಷೇತ್ರದ ಶಾಸಕರು. ಆಶಿಶ್ ಸೂದ್ ಜನಕ್ಪುರಿಯ ಶಾಸಕರು. ಪಂಕಜ್ ಸಿಂಗ್ ವಿಕಾಸಪುರಿಯ ಶಾಸಕರು. ರವೀಂದ್ರ ಇಂದ್ರರಾಜ್ ಬವಾನದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…