ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ.
ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.
ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52-7:00 ಗಂಟೆ ನಡುವೆ ಕಾರು ಸ್ಫೋಟಗೊಂಡಿದೆ. ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್ ಧರಿಸಿದ್ದ ಚಾಲಕ ಒಬ್ಬನೇ ಕುಳಿತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದನ್ನು ಕಂಡುಹಿಡಿಯಲು ೧೦೦ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಶಂಕಿತ ಆತ್ಮಹತ್ಯಾ ಬಾಂಬರ್ ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…