ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ.
ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.
ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52-7:00 ಗಂಟೆ ನಡುವೆ ಕಾರು ಸ್ಫೋಟಗೊಂಡಿದೆ. ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್ ಧರಿಸಿದ್ದ ಚಾಲಕ ಒಬ್ಬನೇ ಕುಳಿತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದನ್ನು ಕಂಡುಹಿಡಿಯಲು ೧೦೦ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಶಂಕಿತ ಆತ್ಮಹತ್ಯಾ ಬಾಂಬರ್ ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…