Featured

ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ – vishwanews24

ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ

ನವದೆಹಲಿ : ದೆಹಲಿಯ ಕೆಂಪು ಕೋಟೆ ಬಳಿ ನ.10ರಂದು ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ.

ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಹೀಗಾಗಿ ಪುಲ್ವಾಮಾದಲ್ಲಿರುವ ಉಮರ್ ತಾಯಿಯ ಡಿಎನ್‌ಎ ಮಾದರಿಯನ್ನೂ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು.

ಸ್ಫೋಟದ ಬಳಿಕ ಉಮರ್ ಕಾಲು ಸ್ಟೀರಿಂಗ್ ವೀಲ್ ಮತ್ತು ಆಕ್ಸಿಲರೇಟರ್ ನಡುವೆ ಸಿಲುಕಿಕೊಂಡಿತ್ತು. ಡಿಎನ್‌ಎ ಮಾದರಿ ಉಮರ್ ತಾಯಿಯ ಮಾದರಿಯೊಂದಿಗೆ ಹೊಂದಿಕೆಯಾಗಿದೆ ಎಂದು ದೆಹಲಿ ಪೊಲೀಸರ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಚುರುಕುಗೊಳಿಸಿದ್ದು, ಬುಧವಾರ ಅಧಿಕಾರಿಗಳು ಸ್ಫೋಟಗೊಂಡಿದ್ದ ಕಾರು ಹೊರತಾಗಿ ದೆಹಲಿಗೆ ಎಂಟ್ರಿಯಾಗಿದ್ದ ಇನ್ನೊಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಸ್ಫೋಟಕ್ಕೂ ಮುನ್ನ ದೆಹಲಿಗೆ ಉಗ್ರರ ಎರಡು ಕಾರುಗಳು ಎಂಟ್ರಿಯಾಗಿದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಎರಡು ಕಾರುಗಳ ಪೈಕಿ ಕೆಂಪುಕೋಟೆ ಬಳಿ ಒಂದು ಕಾರು ಸ್ಫೋಟಗೊಂಡಿತ್ತು. ಇದನ್ನರಿತ ಅಧಿಕಾರಿಗಳು ಇನ್ನೊಂದು ಕಾರಿನ ಪತ್ತೆ ಹಚ್ಚುತ್ತಿದ್ದರು. ದೆಹಲಿಯಲ್ಲಿ ಚೆಕ್‌ಪೋಸ್ಟ್ ಮೂಲಕ ಕಾರಿನ ಹುಡುಕಾಟ ನಡೆಸಿದ್ದರು. ಬಳಿಕ ಫರೀದಾಬಾದ್ ಪೊಲೀಸರು ಕೆಂಪು ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಪತ್ತೆ ಮಾಡಿದ್ದರು.

ಪತ್ತೆಯಾದ ಕಾರು ಕೂಡ ದೆಹಲಿ ಸ್ಫೋಟದ ಪ್ರಮುಖ ಶಂಕಿತ ಡಾ.ಉಮರ್ ಉನ್ ನಬಿಗೆ ಸೇರಿದ್ದು, ನಕಲಿ ದಾಖಲೆಗಳನ್ನು ನೀಡಿ, ಕಾರು ಖರೀದಿಸಿದ್ದಾನೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ದಾಳಿಯಾದ ಬಳಿಕ ವಾಹನದ ಮಾಲೀಕತ್ವದ ಬಗ್ಗೆ ಮಾಹಿತಿ ಸಿಗಬಾರದು ಎಂಬ ಉದ್ದೇಶದೊಂದಿಗೆ ನಕಲಿ ದಾಖಲೆಗಳನ್ನು ನೀಡಿದ್ದ. ಪತ್ತೆಯಾದ ಕಾರು ಡಾ.ಉಮರ್ ಉನ್ ನಬಿ ಹೆಸರಿನಲ್ಲಿ ನೋಂದಣಿಯಾಗಿದ್ದು, ಈಶಾನ್ಯ ದೆಹಲಿಯ ನ್ಯೂ ಸೀಲಾಂಪುರ್ ಪ್ರದೇಶದ ವಿಳಾಸವೊಂದನ್ನು ಹೊಂದಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago