ಉಡುಪಿ, : ರೈತ ವಿರೋಧಿ ಕೃಷಿ ಮತ್ತು ಭೂ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಮೋದಿ ಸರ್ಕಾರದ ದಾಳಿಯನ್ನು ಖಂಡಿಸಿ ಹಾಗೂ ರೈತರ ಹೋರಾಟವನ್ನು ಬೆಂಬಲಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಸಿಐಟಿಯು, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ ಸಂಘದ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.
ಸಭೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ”ದೇಶದ ದೊಡ್ಡ ಬಂಡವಾಳಗಾರರಿಗೆ ದೇಶದ ಜನರ ಸಂಪತ್ತನ್ನು ಮಾರಾಟ ಮಾಡುವುದು ಬಿಜೆಪಿ ಪಕ್ಷದ ದೇಶಭಕ್ತಿ ಎಂಬುವುದು ಸಾಬೀತಾಗಿದೆ. ಇಂತಹ ದೇಶಭಕ್ತಿಯು ರೈತರು, ಕಾರ್ಮಿಕರು, ಕೂಲಿಕಾರರಿಗೆ ಬಹುದೊಡ್ಡ ಅಪಾಯ ತರಲಿದೆ. ಬಿಜೆಪಿಯ ಬಂಡವಾಳಗಾರರ ಪರವಾದ ಇಂತಹ ರಾಷ್ಟ್ರೀಯವಾದ ಒಪ್ಪಲು ಸಾಧ್ಯವಿಲ್ಲ” ಎಂದು ಹೇಳಿದರು.
”ಸಣ್ಣ ಕೈಗಾರಿಕೆಗಳು ನಾಶವಾಗುತ್ತಿದ್ದು ನಿರುದ್ಯೋಗ ಉಲ್ಬಣಗೊಂಡು ಜಿಡಿಪಿ ಕುಸಿಯುತ್ತಿದೆ. ಜನರ ಆದಾಯ ಸ್ಥಗಿತಗೊಂಡಿದೆ. ರೈತ ವಿರೋಧಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳು ಜನರಿಗೆ ಮತ್ತಷ್ಟು ಸಂಕಷ್ಟ ತರಲಿದೆ. ಇಂತಹ ನೀತಿಗಳ ವಿರುದ್ದ ದಹಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸರಕಾರ ಕೂಡಲೇ ಅವರ ಮೇಲೆ ದಾಖಲಿಸಿರುವ ಕೇಸುಗಳನ್ನು ವಾಪಾಸ್ಸು ಪಡೆಯಬೇಕು. ಕಾರ್ಪೋರೇಟ್ ಪರ ನೀತಿ ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭ ಪ್ರಧಾನ ಮಂತ್ರಿಯವರಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ ನೀಡಲಾಯಿತು. ಸಿಐಟಿಯು ಮುಖಂಡರಾದ ಕೆ.ಶಂಕರ್, ಎಚ್ ನರಸಿಂಹ, ಶಶಿಧರಗೊಲ್ಲ, ಮಹಾಬಲವಡೇರ ಹೋಬಳಿ, ಬಲ್ಕೀಸ್ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…