ಕಾರ್ಕಳ: ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ‘ತುಕುಡೇ ಗ್ಯಾಂಗ್’ ಇಂದು ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ನಿರತರೆಲ್ಲ ರೈತರಲ್ಲ, ಅರ್ಬನ್ ನಕ್ಸಲರು ಎಂದು ಉಡುಪಿ ಮತ್ತು ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ ವಾಗ್ಧಾಳಿ ನಡೆಸಿದರು.
ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರಿಯಾಣ ಮತ್ತು ಪಂಜಾಬಿನ ರೈತರು ದೆಹಲಿಯಲ್ಲಿ ರೈತ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲ ನಿಜವಾದ ರೈತರಲ್ಲ ಎಂದರು.
ರಾಜ್ಯದಲ್ಲಿ ಕೂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಅಧಿವೇಶನ ಸಂದರ್ಭ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ನೇತೃತ್ವದ ರೈತ ಹೋರಾಟ ರಾಜಕೀಯ ಪ್ರೇರಿತ. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ ಎಂದು ಸಂಸದೆ ಹೇಳಿದರು.
ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ, ಅನಂತಕೃಷ್ಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…