ಕಾರ್ಕಳ: ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ‘ತುಕುಡೇ ಗ್ಯಾಂಗ್’ ಇಂದು ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ನಿರತರೆಲ್ಲ ರೈತರಲ್ಲ, ಅರ್ಬನ್ ನಕ್ಸಲರು ಎಂದು ಉಡುಪಿ ಮತ್ತು ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ ವಾಗ್ಧಾಳಿ ನಡೆಸಿದರು.
ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರಿಯಾಣ ಮತ್ತು ಪಂಜಾಬಿನ ರೈತರು ದೆಹಲಿಯಲ್ಲಿ ರೈತ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲ ನಿಜವಾದ ರೈತರಲ್ಲ ಎಂದರು.
ರಾಜ್ಯದಲ್ಲಿ ಕೂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಅಧಿವೇಶನ ಸಂದರ್ಭ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ನೇತೃತ್ವದ ರೈತ ಹೋರಾಟ ರಾಜಕೀಯ ಪ್ರೇರಿತ. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ ಎಂದು ಸಂಸದೆ ಹೇಳಿದರು.
ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ, ಅನಂತಕೃಷ್ಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…