ನವದೆಹಲಿ : ದೆಹಲಿ ಸ್ಫೋಟದ ಬಗ್ಗೆ ಭಾರತದ ಪ್ರಮುಖ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
“ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ನನ್ನ ಸಹ ನಾಗರಿಕರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಹೇಳಿದರು.
“ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ರಾಷ್ಟ್ರಕ್ಕೆ ದೃಢವಾಗಿ ಭರವಸೆ ನೀಡಲು ಬಯಸುತ್ತೇನೆ” ಎಂದರು. ಜೊತೆಗೆ ಮೃತರ ಕುಟುಂಬಗಳಿಗೆ ರಕ್ಷಣಾ ಸಚಿವರು ತಮ್ಮ ಸಂತಾಪ ಸೂಚಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…