ಮುಂಬೈ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಶೇ.100ರಷ್ಟು ಕೇಂದ್ರ ಸರ್ಕಾರವೇ ನೇರಹೊಣೆ ಎಂದು ಎನ್’ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಆರೋಪಿಸಿದ್ದಾರೆ.
ಮುಂಬೈನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್’ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಒಡಕು ರಾಜಕೀಯ ಮಾಡುತ್ತಿದೆ. ಸಂವಿಧಾನದ ಪ್ರಕಾರ ಸಾರ್ವಜನಿಕ ಪ್ರತಿನಿಧಿಗಳಾಗಲೀ, ಆಡಳಿತಾರೂಢ ಪಕ್ಷವಾಗಲೀ ದೆಹಲಿಯಲ್ಲಿ ಸೃಷ್ಟಿಯಾದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಹೊಣೆಯಲ್ಲವ. ಕೇಂದ್ರ ಸರ್ಕಾರದ ಮೇಲೆ ಇದರ ಜವಾಬ್ದಾರಿಯಿದೆ. ದೆಹಲಿಯಲ್ಲಿ ಏನೇ ಆಗಿದ್ದರೂ ಅದಕ್ಕೆ ಕೇಂದ್ರ ಸರ್ಕಾರವೇ ಶೇ.100 ಹೊಣೆಯಾಗಿದೆ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜಧಾನಿ ದೆಹಲಿ ಹೊತ್ತಿ ಉರಿಯುತ್ತಲೇ ಇದೆ. ಕೇಂದ್ರ ಸರ್ಕಾರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ ದೆಹಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದಲಿಲ್ಲ.ಹೀಗಾಗಿ ಕೋಮುವಾದವನ್ನು ಬಿತ್ತುವ ಮೂಲಕ ಸಮಾಜವನ್ನು ಒಡೆಯಲು ಯತ್ನಿಸುತ್ತಿದೆ. ಸಮಾಜದಲ್ಲಿ ಹಾಗೂ ಧಾರ್ಮಿಕ ಶಾಂತಿ ಕದಡಲು ಪ್ರಧಾನಮಂತ್ರಿ, ಗೃಹ ಸಚಿವ ಹಾಗೂ ಕೇಂದ್ರದ ಸಚಿವರೇ ಕಾರಣ. ದೇಶದ ಪ್ರಧಾನಮಂತ್ರಿಗಳು ಎಲ್ಲಾ ಧರ್ಮಕ್ಕೂ ಸೀಮಿತರಾಗಿರಬೇಕು. ಎಲ್ಲಾ ರಾಜ್ಯ, ಎಲ್ಲಾ ರೀತಿಯ ಜನತೆ ಹಾಗೂ ಇಡೀ ದೇಶದ ವ್ಯಕ್ತಿಯಾಗಿರಬೇಕು. ಆದರೆ, ಅಂತಹ ಸ್ಥಾನದಲ್ಲಿರುವ ವ್ಯಕ್ತಿ ಧಾರ್ಮಿಕವಾಗಿ ಮಾತನಾಡುತ್ತಿದ್ದಾರೆ. ಇದೇ ರೀತಿಯಾಗಿಯೇ ಕೇಂದ್ರ ಸಚಿವರು ಹಾಗೂ ಗೃಹ ಸಚಿವರೂ ಮಾತನಾಡುತ್ತಿದ್ದಾರೆ. ಇವುಗಳಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡುವ ಬದಲು ನಾಯಕರು ಜನತೆಯ ಭದ್ರತೆಯತ್ತ ತಮ್ಮ ಬಲವನ್ನು ಉಪಯೋಗಿಸಬೇಕು. ಗೋಲಿಮಾರೋ ಎಂಬಂತಹ ಹೇಳಿಕೆಗಳನ್ನು ಬಿಜೆಪಿ ಸಚಿವರು ನೀಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…