Featured

ದೇಗುಲಗಳಲ್ಲಿ ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ : ದಿಗ್ವಿಜಯ್ ಸಿಂಗ್ -Vishwanews24

ಭೋಪಾಲ್: “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ” ಎಂದು ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್ ಮಂಗಳವಾರ ಸ್ವಯಂ ಘೋಷಿತ ದೇವಮಾನವ ಕಂಪ್ಯೂಟರ್ ಬಾಬಾ ನೇತೃತ್ವದ ಹಿಂದೂ ದಾರ್ಶನಿಕರ ಸಮಾವೇಶ ಸಂತ ಸಮಾಗಮ್ ಉದ್ದೇಶಿಸಿ ಮಾತನಾಡಿ ಸಿಂಗ್ “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಸರಿ ಬಟ್ಟೆ ಧರಿಸಿದ ಜನರು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ, ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ.. ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ? ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ” ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಮ್ಮುಖದಲ್ಲೇ ಸಿಂಗ್ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಟಾಂಗ್ ನೀಡಿದ ಸಿಂಗ್ “ಅಧಿಕಾರ ಹಿಡಿಯಲು ಬಿಜೆಪಿ ಧರ್ಮವನ್ನು ಬಳಸುತ್ತದೆ. ಜೈ ಶ್ರೀ ರಾಮ್ ಘೋಷಣೆ ರಾಜಕೀಯವಾಗಿ ಮಾರ್ಪಟ್ಟಿದೆ.ಹಾಗಾಗಿ ಇದೀಗ ಜೈ ಸಿಯಾ ರಾಮ್ ಎಂದು ಘೋಷಣೆ ಮಾಡಬೇಕಾದ ಅಗತ್ಯ ಬಂದಿದೆ.ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಸಂಸ್ಕೃತ ಶಾಲೆಗಳ ರಕ್ಷಣೆಗೆ ಬದ್ದವಾಗಿದೆ.ಧಾರ್ಮಿಕ ವಿಚಾರವನ್ನು ಪ್ರಾಥಮಿಕ ತರಗತಿಗಳ ಪಠ್ಯಕ್ರಮದಲ್ಲಿ ಸೇರಿಸಲು ನಾನು ಸಿಎಂ ಮತ್ತು ಸರ್ಕಾರವನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

7 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

7 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

8 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

8 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

11 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

11 hours ago