ಭೋಪಾಲ್: “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ” ಎಂದು ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್ ಮಂಗಳವಾರ ಸ್ವಯಂ ಘೋಷಿತ ದೇವಮಾನವ ಕಂಪ್ಯೂಟರ್ ಬಾಬಾ ನೇತೃತ್ವದ ಹಿಂದೂ ದಾರ್ಶನಿಕರ ಸಮಾವೇಶ ಸಂತ ಸಮಾಗಮ್ ಉದ್ದೇಶಿಸಿ ಮಾತನಾಡಿ ಸಿಂಗ್ “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಸರಿ ಬಟ್ಟೆ ಧರಿಸಿದ ಜನರು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ, ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ.. ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ? ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ” ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಮ್ಮುಖದಲ್ಲೇ ಸಿಂಗ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಗೆ ಟಾಂಗ್ ನೀಡಿದ ಸಿಂಗ್ “ಅಧಿಕಾರ ಹಿಡಿಯಲು ಬಿಜೆಪಿ ಧರ್ಮವನ್ನು ಬಳಸುತ್ತದೆ. ಜೈ ಶ್ರೀ ರಾಮ್ ಘೋಷಣೆ ರಾಜಕೀಯವಾಗಿ ಮಾರ್ಪಟ್ಟಿದೆ.ಹಾಗಾಗಿ ಇದೀಗ ಜೈ ಸಿಯಾ ರಾಮ್ ಎಂದು ಘೋಷಣೆ ಮಾಡಬೇಕಾದ ಅಗತ್ಯ ಬಂದಿದೆ.ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಸಂಸ್ಕೃತ ಶಾಲೆಗಳ ರಕ್ಷಣೆಗೆ ಬದ್ದವಾಗಿದೆ.ಧಾರ್ಮಿಕ ವಿಚಾರವನ್ನು ಪ್ರಾಥಮಿಕ ತರಗತಿಗಳ ಪಠ್ಯಕ್ರಮದಲ್ಲಿ ಸೇರಿಸಲು ನಾನು ಸಿಎಂ ಮತ್ತು ಸರ್ಕಾರವನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…