ಕೇರಳ: ಜಲಪ್ರಳಯಕ್ಕೆ ದೇವರನಾಡು ಕೇರಳ ತತ್ತರಿಸಿದ್ದು, ಈವರೆಗೆ ಮಳೆ, ಭೂಕುಸಿತ, ಪ್ರವಾಹ, ನೆರೆ ಮುಂತಾಗಿ ಸಂಭವಿಸಿರುವ ದುರಂತಗಳಿಗೆ ಬಲಿಯಾದವರ ಸಂಖ್ಯೆ 79ಕ್ಕೇರಿದೆ.
ಕಳೆದ ಆಗಸ್ಟ್ 8ರಿಂದ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾರಿ ಮಳೆ ಇನ್ನೂ ಮುಂದುವರಿದಿದ್ದು ಈ ಪರಿಸ್ಥಿತಿ ಶನಿವಾರದ ತನಕವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಿದ್ದವಾಗಿರುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಪ್ರಧಾನಿ ಮೋದಿ ಅವರಿಗೆ ಫೋನಿನಲ್ಲಿ ಕೇರಳದ ಸ್ಥಿತಿಗತಿಯನ್ನು ವಿವರಿಸಿದ್ದಾರೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ, ಪರಿಹಾರ ಒದಗಿಸುವಿಕೆಯನ್ನು ಚುರುಕುಗೊಳಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಸೂಚಿಸಿದ್ದು, ಕೇರಳ ಜನರ ಸುರಕ್ಷೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಿರಂತರ ಜಡಿ ಮಳೆ, ಪ್ರವಾಹ, ಭೂಕುಸಿತದಿಂದ ತತ್ತರಿಸುತ್ತಿರುವ ಕೇರಳದ ಎಲ್ಲ 14 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಪರಿಸ್ಥಿತಿ ಗಂಭೀರವಿದ್ದು, 50,000ಕ್ಕೂ ಹೆಚ್ಚು ಜನ ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…