Featured

ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ : ಸ್ಫೋಟಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ – Vishwanews24

ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ: ಸ್ಫೋಟಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್

ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ.

ದೇವರಾಜೇಗೌಡ ಅವರು ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ ಎಂದಿರುವ ಮಾಜಿ ಕಾರ್ ಚಾಲಕ ಕಾರ್ತಿಕ್, ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದಾರೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರಿಗೆ ನಾನು ವಿಡಿಯೋ ಕೊಟ್ಟಿಲ್ಲ’ ಎಂದಿರುವ ಕಾರ್ತಿಕ್, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.

ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆಯೋ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago