ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ.
ದೇವರಾಜೇಗೌಡ ಅವರು ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ ಎಂದಿರುವ ಮಾಜಿ ಕಾರ್ ಚಾಲಕ ಕಾರ್ತಿಕ್, ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್ ರೇವಣ್ಣ ಸ್ಟೇ ತಂದಿದ್ದಾರೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರಿಗೆ ನಾನು ವಿಡಿಯೋ ಕೊಟ್ಟಿಲ್ಲ’ ಎಂದಿರುವ ಕಾರ್ತಿಕ್, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ ಇವತ್ತು ಎಸ್ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆಯೋ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…