ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ ? : ಎಚ್.ಡಿ.ಕುಮಾರಸ್ವಾಮಿ – Vishwanews24
ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ ..
ಟಿಪ್ಪು ದೇವಾಲಯಗಳಿಗೆ ದಾನ ಮಾಡಿದ್ದ ಭೂಮಿ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಬಿಟ್ಟುಕೊಡುತ್ತೀರಾ?
ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ..
ಅಷ್ಟಮಂಗಲ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ..
ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ..
ಮೈಸೂರು: “ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಅಂದರೆ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ?” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ? ಅದನ್ನು ಸರಿಪಡಿಸಿ ಅಂತ ಕೇಳಿತ್ತಾ” ಎಂದರು.
“ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ. ಅವರೂ ಕೂಡಾ ಬಂದು ಕೇಳಿದರೆ ನೀವು ಆ ಭೂಮಿ ಕೊಡುತ್ತೀರಾ?. ಇದನ್ನು ಬಿಟ್ಟು ಜನರ ಬದುಕನ್ನು ನೋಡಿ” ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಕೂಡ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. “ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ. ಅಲ್ಲಿಂದ ಬರುವ ಸಂದೇಶಗಳನ್ನು ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ” ಎಂದರು. ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ ಎಂದು ಟೀಕಿಸಿದ್ದರೆ.
ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ. ಇನ್ನೂ ಒಂದು ವರ್ಷ ಈ ತರದ ಬರವಣೆಗೆಗಳು ನಡೆಯುತ್ತಇರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತುಷ್ಟು ಹಾಳಾಗುತ್ತದೆ. “ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ” ಎಂದು ಎಚ್. ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
