Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಮೈಸೂರು: “ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಅಂದರೆ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ?” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ? ಅದನ್ನು ಸರಿಪಡಿಸಿ ಅಂತ ಕೇಳಿತ್ತಾ” ಎಂದರು.
“ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ. ಅವರೂ ಕೂಡಾ ಬಂದು ಕೇಳಿದರೆ ನೀವು ಆ ಭೂಮಿ ಕೊಡುತ್ತೀರಾ?. ಇದನ್ನು ಬಿಟ್ಟು ಜನರ ಬದುಕನ್ನು ನೋಡಿ” ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಕೂಡ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. “ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ. ಅಲ್ಲಿಂದ ಬರುವ ಸಂದೇಶಗಳನ್ನು ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ” ಎಂದರು. ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ ಎಂದು ಟೀಕಿಸಿದ್ದರೆ.
ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ. ಇನ್ನೂ ಒಂದು ವರ್ಷ ಈ ತರದ ಬರವಣೆಗೆಗಳು ನಡೆಯುತ್ತಇರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತುಷ್ಟು ಹಾಳಾಗುತ್ತದೆ. “ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ” ಎಂದು ಎಚ್. ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…