ನವದೆಹಲಿ: ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ಎಂದರು.
ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…