ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇವರ ವಿಶೇಷ ದರ್ಶನ ಮಾಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ವಿತ್ತ ಸಚಿವೆ ಉಡುಪಿಯಲ್ಲಿ ಎಡೆಬಿಡದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.
ಶುಕ್ರವಾರ ರಾತ್ರಿ ಮಣಿಪಾಲಕ್ಕೆ ಬಂದಿದ್ದ ಅವರು, ಕೊಲ್ಲೂರಿಗೆ ಭೇಟಿಯಾಗಿದ್ದಾರೆ. ಕೊಲ್ಲೂರು ದೇವಸ್ಥಾನದ ಪರವಾಗಿ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತ ಮಾಡಿದರು. ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದೇವಿಯ ವಿಶೇಷ ದರ್ಶನ ಮಾಡಿದ್ದಾರೆ. ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದ್ದಾರೆ. ನಂತರ ಕೊಲ್ಲೂರಿನ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳನ್ನು ಸಂದರ್ಶಿಸಿ ಮಹಾ ಪೂಜೆಯಲ್ಲಿ ಭಾಗಿಯಾದರು.
ಸಚಿವೆ ನಿರ್ಮಲಾ ಸೀತಾರಾಮನ್ ಮಾವ ಜೊತೆಗಿದ್ದು, ದೇವರ ದರ್ಶನ ಮಾಡಿದರು. ದೇವಸ್ಥಾನದ ಯಜ್ಞಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾದರು. ಕೇಂದ್ರ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬಿಜೆಪಿಯ ಕಾರ್ಯಕರ್ತರು ಸ್ಥಳೀಯ ನಾಯಕರು ಭೇಟಿಯಾದರು. ಸುಮಾರು 20 ನಿಮಿಷಗಳ ಕಾಲ ಸಚಿವೆ ಚರ್ಚಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಗೌರವಿಸಲಾಯಿತು.
ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರ ಜೊತೆ ಸಮಾಲೋಚನೆ ಮಾತುಕತೆ ಮಾಡಿದ ನಿರ್ಮಲಾ ಸೀತಾರಾಮನ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಆಗಿದ್ದೇನೆ ದೇವರ ದರ್ಶನ, ಚಂಡಿಕಾಹೋಮದ ಸೇವೆಯಿಂದ ಮನಸ್ಸಿಗೆ ಖುಷಿಯಾಗಿದೆ ಎಂದು ಹೇಳಿದರು. ಮುಂದೆ ಮತ್ತೆ ಕ್ಷೇತ್ರಕ್ಕೆ ಭೇಟಿಕೊಡುವುದಾಗಿ ಹೇಳಿದರು.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…