ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇವರ ವಿಶೇಷ ದರ್ಶನ ಮಾಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ವಿತ್ತ ಸಚಿವೆ ಉಡುಪಿಯಲ್ಲಿ ಎಡೆಬಿಡದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.
ಶುಕ್ರವಾರ ರಾತ್ರಿ ಮಣಿಪಾಲಕ್ಕೆ ಬಂದಿದ್ದ ಅವರು, ಕೊಲ್ಲೂರಿಗೆ ಭೇಟಿಯಾಗಿದ್ದಾರೆ. ಕೊಲ್ಲೂರು ದೇವಸ್ಥಾನದ ಪರವಾಗಿ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತ ಮಾಡಿದರು. ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದೇವಿಯ ವಿಶೇಷ ದರ್ಶನ ಮಾಡಿದ್ದಾರೆ. ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದ್ದಾರೆ. ನಂತರ ಕೊಲ್ಲೂರಿನ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳನ್ನು ಸಂದರ್ಶಿಸಿ ಮಹಾ ಪೂಜೆಯಲ್ಲಿ ಭಾಗಿಯಾದರು.
ಸಚಿವೆ ನಿರ್ಮಲಾ ಸೀತಾರಾಮನ್ ಮಾವ ಜೊತೆಗಿದ್ದು, ದೇವರ ದರ್ಶನ ಮಾಡಿದರು. ದೇವಸ್ಥಾನದ ಯಜ್ಞಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾದರು. ಕೇಂದ್ರ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬಿಜೆಪಿಯ ಕಾರ್ಯಕರ್ತರು ಸ್ಥಳೀಯ ನಾಯಕರು ಭೇಟಿಯಾದರು. ಸುಮಾರು 20 ನಿಮಿಷಗಳ ಕಾಲ ಸಚಿವೆ ಚರ್ಚಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಗೌರವಿಸಲಾಯಿತು.
ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರ ಜೊತೆ ಸಮಾಲೋಚನೆ ಮಾತುಕತೆ ಮಾಡಿದ ನಿರ್ಮಲಾ ಸೀತಾರಾಮನ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಆಗಿದ್ದೇನೆ ದೇವರ ದರ್ಶನ, ಚಂಡಿಕಾಹೋಮದ ಸೇವೆಯಿಂದ ಮನಸ್ಸಿಗೆ ಖುಷಿಯಾಗಿದೆ ಎಂದು ಹೇಳಿದರು. ಮುಂದೆ ಮತ್ತೆ ಕ್ಷೇತ್ರಕ್ಕೆ ಭೇಟಿಕೊಡುವುದಾಗಿ ಹೇಳಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…