ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿನಿ ಹೇಳಿದರು.
ಅವರು ನಗರಕ್ಕೆ ಭಾನುವಾರ ತಮ್ಮ ಮುಂದಿನ ಚಿತ್ರ ಟೆರರಿಸ್ಟ್ ಚಿತ್ರದ ಪ್ರಮೋಶನ್ ಗೆಂದು ಬಂದಿದ್ದು, ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಿಳೆಯ ಮುಟ್ಟಿನ ವಿಚಾರವನ್ನು ಮುಂದಿಟ್ಟು ಪ್ರವೇಶಕ್ಕೆ ನಿರಾಕರಿಸುವುದು ಸರಿಯಲ್ಲ. ಯಾಕೆಂದರೆ ಯಾವ ಮಹಿಳೆಯೂ ಮುಟ್ಟಿನ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುವುದಿಲ್ಲ. ಉಳಿದ ಸಮಯದಲ್ಲಿ ಮಹಿಳೆಯನ್ನು ದೇವಸ್ಥಾನಕ್ಕೆ ಹೋಗುವುದನ್ನು ತಡೆಯಬಾರದು. ದೇವರ ಆರಾಧನೆಯಲ್ಲಿ ಯಾವುದೇ ತಾರತಮ್ಯ ಮಾಡಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧನೆಯನ್ನು ಹಾಕಬಾರದು ಎಂದು ಪ್ರತಿಕ್ರಿಯಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…