ಮೈಸೂರು: ಶಾಲಾ, ಕಾಲೇಜುಗಳಲ್ಲಿ ಓದುವ ಇತಿಹಾಸದಲ್ಲಿನ ಪಠ್ಯಗಳು ಶೇಕಡ 50 ರಷ್ಟು ಸುಳ್ಳು. ಬುದ್ಧ ಬರುವುದಕ್ಕೆ ಮುನ್ನ ಹಿಂದೂ ಧರ್ಮ ಮೂಢನಂಬಿಕೆ, ಕಂದಾಚಾರದಿಂದ ತುಂಬಿದ ಧರ್ಮ ಆಗಿತ್ತು ಎಂದು ವಿವೇಕಾನಂದರೇ ಹೇಳಿದ್ದಾರೆ ಅಂತಾ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಹಿಷ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಸ್. ಭಗವಾನ್, ಹರಪ್ಪ ನಾಗರಿಕತೆಯಲ್ಲೇ ಶಿವನ ಹೆಸರಿದೆ. ಶಿವ ಯಜ್ಞ, ಯಾಗಗಳನ್ನು ನಿರಾಕರಿಸಿದವನು. ದೇಶದ ಮೂಲ ದೇವರಾದ ಶಿವನ ದೇವಸ್ಥಾನ ಕಟ್ಟುತ್ತಿಲ್ಲ, ಆದ್ರೆ ಜಾತಿ, ವರ್ಣಭೇದ ಮಾಡಿದ ರಾಮನ ದೇವಸ್ಥಾನ ನಿರ್ಮಾಣ ಮಾಡಲು ಹೊರಟಿದ್ದಾರೆ. ಇರುವುದು ಎರಡು ಜಾತಿ.. ಜನಿವಾರ ಹಾಕಿದವರು, ಜನಿವಾರ ಹಾಕದವರು. ರಾಮಾಯಣದಲ್ಲಿ ರಾಮನ ಬಾಯಲ್ಲಿ ಬುದ್ಧನನ್ನು ಬೈಯಿಸಿದ್ದಾರೆ. ಆದರೆ ಪುರಾಣದಲ್ಲಿ ರಾಮನ ಒಂದು ಅವತಾರ ಬುದ್ಧ ಅಂತ ಹೇಳುತ್ತಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮನುವಾದಿಗಳನ್ನ ತಿರಸ್ಕರಿಸಿ. ರಾಮನ ದೇವಸ್ಥಾನ ಕಟ್ಟಲು ಹೊರಟಿರೋ ಮಂದಿಗೆ ಓಟ್ ಹಾಕ್ಬೇಡಿ. ರಾಮ ಮಂದಿರ ಕಟ್ಟುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಿ. ರಾಮ ಮಂದಿರ ಕಟ್ಟುವ ಬದಲು ಹೊಸ ಡ್ಯಾಂಗಳನ್ನ ಕಟ್ಟಿ. ದೇಶದ ಮೇಲೆ 27 ಬಾರಿ ವಿದೇಶಿಯರಿಂದ ಆಕ್ರಮಣ ಆಯ್ತು. ನಿಮ್ಮ ರಾಮ, ಚಾಮುಂಡೇಶ್ಚರಿ, ಶಿವ ಎಲ್ಲಿ ಹೋಗಿದ್ರು, ಯಾಕೆ ರಕ್ಷಣೆ ಮಾಡಲಿಲ್ಲ? ಹೀಗಾಗಿ ದೇವರ ಪೊಟೋಗಳನ್ನ ಎಸೆದು ವಾಸ್ತವದ ನಡುವೆ ಬದುಕಿ, ನಮಗೆ ರಾಮರಾಜ್ಯ ಬೇಡ, ಭೀಮರಾಜ್ಯ ಬೇಕು ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…