ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ಮೂಲದ ಯುವಕ ನಾಪತ್ತೆ – Vishwanews24
ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ಮೂಲದ ಯುವಕ ನಾಪತ್ತೆ
ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿರುವ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ.
ಇನ್ನು ದೇವರಮನೆಗೆ ಪ್ರವಾಸಕ್ಕೆ ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ಕಣ್ಮರೆಯಾಗಿದ್ದಾನೆ.
ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ.
ಇನ್ನು ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
