ಚಿಕ್ಕಮಗಳೂರು: ದೇವರಮನೆಗೆಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ ಮಾತ್ರ ಆರಾಮವಾಗಿ ಮನೆಗೆ ಹೋಗಿ ಮಲಗಿದ್ದ.
ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ನಾಲ್ವರು ಸ್ನೇಹಿತರ ಜೊತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡಕ್ಕೆ ಆಗಮಿಸಿದ್ದರು. ಈ ವೇಳೆ ಸ್ನೇಹಿತರ ಜೊತೆ ಜಗಳ ಮಾಡಿಕೊಂಡು ಹೋದ ದೀಕ್ಷಿತ್ ಗುಡ್ಡದ ಬಳಿ ನಾಪತ್ತೆಯಾಗಿದ್ದ.
ನಾಲ್ವರು ಯುವಕರು ದೇವರಮನೆ ಬಳಿಯ ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಟ್ರಕ್ಕಿಂಗ್ ಹೋಗಿದ್ದರು. ಆದರೆ ಈ ವೇಳೆ ಸ್ನೇಹಿತರ ಮಧ್ಯೆ ಮಾತಿನ ಚಕಮಕಿ ನಡೆದು ಜಗಳವಾಡಿದ್ದಾರೆ. ಸ್ನೇಹಿತರು ಕಾರಿನಲ್ಲಿ ಬಾ ಅಂತ ಕರೆದರೂ ಬಾರದ ದೀಕ್ಷಿತ್ ನಡೆದೇ ಹೋಗಿದ್ದಾನೆ. ಆದರೆ ಆತ ಎಲ್ಲಿಗೆ ಹೋಗಿದ್ದಾನೆ ಎಂದು ಗೊತ್ತಿಲ್ಲ.
ಸ್ನೇಹಿತರು, ಸ್ಥಳೀಯರು ಹಾಗೂ ಪೊಲೀಸರು ಕೂಡಾ ದೀಕ್ಷಿತ್ಗಾಗಿ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಸಿಕ್ಕಿಲ್ಲ. ಪೊಲೀಸರು ಮಧ್ಯರಾತ್ರಿ 2 ಗಂಟೆಯವರೆಗೆ ಹುಡುಕಾಡಿದ್ದಾರೆ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದ್ದಾರೆ. ಆದರೆ ಚಾರ್ಮಾಡಿ ಘಾಟಿಯ ತಪ್ಪಲು, ಬೃಹತ್ ಕಾಡು, ಮುಗಿಲೆತ್ತರದ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಮಂಜು ಇದ್ದ ಕಾರಣ ಕಾರ್ಯಾಚರಣೆಗೂ ತೊಂದರೆಯಾಗಿದೆ. ಆದರೂ ಪೊಲೀಸರು ಹುಡುಕಾಟವನ್ನು ಕೈಬಿಟ್ಟಿಲ್ಲ.
ಇತ್ತ ದೀಕ್ಷಿತ್ ಸ್ನೇಹಿತರ ಜೊತೆ ಜಗಳವಾಡಿದ ಬೇಜಾರಿನಲ್ಲಿ ಕುಡಿದು ಊರಿಗೆ ಹೋಗಿದ್ದಾನೆ. ಮನೆಗೆ ಹೋದರೆ ಬೈಯ್ಯುತ್ತಾರೆಂದು ಮನೆಯಿಂದ ಸ್ವಲ್ಪ ದೂರದಲ್ಲಿ ಮೋರಿಯಲ್ಲಿ (ಚರಂಡಿ) ಮಲಗಿದ್ದ ಎಂದು ತಿಳಿದುಬಂದಿದೆ. ಸ್ಥಳೀಯರು ಆತನನ್ನು ಮನೆಗೆ ಕಳುಹಿಸಿದ್ದಾರೆ. ಸದ್ಯ ದೀಕ್ಷಿತ್ ಸೇಫ್ ಆಗಿ ಮನೆ ತಲುಪಿರುವುದು ತಿಳಿದು ಸ್ನೇಹಿತರು ನಿಟ್ಟುಸಿರು ಬಿಟ್ಟಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…