ಚಿಕ್ಕಮಗಳೂರು: ದೇವರಮನೆಗೆಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ ಮಾತ್ರ ಆರಾಮವಾಗಿ ಮನೆಗೆ ಹೋಗಿ ಮಲಗಿದ್ದ.
ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ನಾಲ್ವರು ಸ್ನೇಹಿತರ ಜೊತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡಕ್ಕೆ ಆಗಮಿಸಿದ್ದರು. ಈ ವೇಳೆ ಸ್ನೇಹಿತರ ಜೊತೆ ಜಗಳ ಮಾಡಿಕೊಂಡು ಹೋದ ದೀಕ್ಷಿತ್ ಗುಡ್ಡದ ಬಳಿ ನಾಪತ್ತೆಯಾಗಿದ್ದ.
ನಾಲ್ವರು ಯುವಕರು ದೇವರಮನೆ ಬಳಿಯ ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಟ್ರಕ್ಕಿಂಗ್ ಹೋಗಿದ್ದರು. ಆದರೆ ಈ ವೇಳೆ ಸ್ನೇಹಿತರ ಮಧ್ಯೆ ಮಾತಿನ ಚಕಮಕಿ ನಡೆದು ಜಗಳವಾಡಿದ್ದಾರೆ. ಸ್ನೇಹಿತರು ಕಾರಿನಲ್ಲಿ ಬಾ ಅಂತ ಕರೆದರೂ ಬಾರದ ದೀಕ್ಷಿತ್ ನಡೆದೇ ಹೋಗಿದ್ದಾನೆ. ಆದರೆ ಆತ ಎಲ್ಲಿಗೆ ಹೋಗಿದ್ದಾನೆ ಎಂದು ಗೊತ್ತಿಲ್ಲ.
ಸ್ನೇಹಿತರು, ಸ್ಥಳೀಯರು ಹಾಗೂ ಪೊಲೀಸರು ಕೂಡಾ ದೀಕ್ಷಿತ್ಗಾಗಿ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಸಿಕ್ಕಿಲ್ಲ. ಪೊಲೀಸರು ಮಧ್ಯರಾತ್ರಿ 2 ಗಂಟೆಯವರೆಗೆ ಹುಡುಕಾಡಿದ್ದಾರೆ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದ್ದಾರೆ. ಆದರೆ ಚಾರ್ಮಾಡಿ ಘಾಟಿಯ ತಪ್ಪಲು, ಬೃಹತ್ ಕಾಡು, ಮುಗಿಲೆತ್ತರದ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಮಂಜು ಇದ್ದ ಕಾರಣ ಕಾರ್ಯಾಚರಣೆಗೂ ತೊಂದರೆಯಾಗಿದೆ. ಆದರೂ ಪೊಲೀಸರು ಹುಡುಕಾಟವನ್ನು ಕೈಬಿಟ್ಟಿಲ್ಲ.
ಇತ್ತ ದೀಕ್ಷಿತ್ ಸ್ನೇಹಿತರ ಜೊತೆ ಜಗಳವಾಡಿದ ಬೇಜಾರಿನಲ್ಲಿ ಕುಡಿದು ಊರಿಗೆ ಹೋಗಿದ್ದಾನೆ. ಮನೆಗೆ ಹೋದರೆ ಬೈಯ್ಯುತ್ತಾರೆಂದು ಮನೆಯಿಂದ ಸ್ವಲ್ಪ ದೂರದಲ್ಲಿ ಮೋರಿಯಲ್ಲಿ (ಚರಂಡಿ) ಮಲಗಿದ್ದ ಎಂದು ತಿಳಿದುಬಂದಿದೆ. ಸ್ಥಳೀಯರು ಆತನನ್ನು ಮನೆಗೆ ಕಳುಹಿಸಿದ್ದಾರೆ. ಸದ್ಯ ದೀಕ್ಷಿತ್ ಸೇಫ್ ಆಗಿ ಮನೆ ತಲುಪಿರುವುದು ತಿಳಿದು ಸ್ನೇಹಿತರು ನಿಟ್ಟುಸಿರು ಬಿಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…