ಉಡುಪಿ: ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಉಡುಪಿಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮತ ಚಲಾಯಿಸಿದ ಬಳಿಕ ಮಾತನಾಡಿದ ಶ್ರೀಗಳು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಮತ ಚಲಾಯಿಸಿದ್ದೇನೆ ಎಂದರು.ಈ ದೇಶಕ್ಕೆ ಒಳಿತಾಗಬೇಕು. ದೇಶದಲ್ಲಿರುವ ಅಭದ್ರತೆ ಹಾಗೂ ಸಮಸ್ಯೆಗಳು ಬಗೆಹರಿಯಬೇಕು ಎಂದು ಹೇಳಿದರು. ಯಾವ ಸರ್ಕಾರ ಬರಬೇಕು ಎಂದು ಪ್ರಶ್ನಿಸಿದಾಗ,ನಾನು ಯಾವುದಕ್ಕೂ ಉತ್ತರ ನೀಡುವುದಿಲ್ಲ,ಎಲ್ಲದಕ್ಕೂ ಒಂದೇ ಉತ್ತರ,ರಾಜ್ಯಕ್ಕೆ ಒಳ್ಳೆಯದಾಗಬೇಕು.ಅದೇ ನಮ್ಮ ಪ್ರಾರ್ಥನೆ ಎಂದರು. ದೇವರ ಇಚ್ಛೆ ಮತ್ತು ಜನರ ಇಚ್ಛೆಯ ಸರ್ಕಾರ ಬರುತ್ತದೆ ಎಂದರು.
ಜಿಲ್ಲೆಯ ಅಭ್ಯರ್ಥಿಗಳಿಗೆ ಹಾರೈಸಿದ ಶ್ರೀಗಳು, ಎಲ್ಲರಿಗೂ ಒಳಿತಾಗಲಿ. ಅಹಿತಕರವಾಗಿ ಏನೂ ಸಂಭವಿಸದಿರಲಿ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]