ದೇವಳಗಳಲ್ಲಿ ವಸ್ತ್ರಸಂಹಿತೆ ಅಳವಡಿಸುವ ಬಗ್ಗೆ ಶೀಘ್ರ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಸುಬ್ರಹ್ಮಣ್ಯ: ರಾಜ್ಯ ಮುಜರಾಯಿ ಇಲಾಖೆ ಅಧೀನದ ದೇವಳಗಳಲ್ಲಿ ವಸ್ತ್ರಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ. ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಎಲ್ಲ ಅಭಿಪ್ರಾಯ ಪಡೆಯಲಾಗುವುದು. ಭಕ್ತರ ಮೇಲೆ ವಸ್ತ್ರಸಂಹಿತೆಯ ಪರಿಣಾಮ, ವಸ್ತ್ರವಿನ್ಯಾಸದ ಬಗೆ ಮತ್ತು ದೇವಳಗಳ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ವಸ್ತ್ರಸಂಹಿತೆ ಅಳವಡಿಕೆ ಮಾಡಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ ಎಂದರು.

ಶೀಘ್ರ ವ್ಯವಸ್ಥಾಪನಾ ಸಮಿತಿ: ಮುಜರಾಯಿ ವ್ಯಾಪ್ತಿಯ 100ಕ್ಕೂ ಹೆಚ್ಚು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದಿದ್ದು, ಹೊಸ ಸಮಿತಿಗೆ ಅರ್ಜಿ ಕರೆಯಲು ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ಸೂಚಿಸಲಾಗಿದೆ. ವಾರದೊಳಗೆ ಪ್ರಕ್ರಿಯೆ ಆರಂಭವಾಗಲಿದೆ. ಧಾರ್ಮಿಕ ಪರಿಷತ್ ಅಂತಿಮವಾಗಿ 9 ಜನರ ತಂಡವನ್ನು ಆಯ್ಕೆ ಮಾಡಲಿದೆ. ಒಟ್ಟು ಪ್ರಕ್ರಿಯೆ ಒಂದು ತಿಂಗಳ ಅವಧಿಯೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಏ.26ರಂದು ಸಾಮೂಹಿಕ ವಿವಾಹ: ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಏ.26ರಂದು ಕುಕ್ಕೆ ದೇವಳದಿಂದ ಸಾಮೂಹಿಕ ವಿವಾಹ ನಡೆಯಲಿದೆ. ಆದಿ ಸುಬ್ರಹ್ಮಣ್ಯದಲ್ಲಿ ನಿರ್ಮಿತವಾದ 180 ಕೊಠಡಿಗಳ ವಸತಿಗೃಹವನ್ನು ಮಾ.24ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಎಸ್.ಅಂಗಾರ, ದೇವಳ ಆಡಳಿತಾಧಿಕಾರಿ, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು.

ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ
ಕುಕ್ಕೆ ದೇವಳದ 400ಕ್ಕೂ ಅಧಿಕ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು 15 ದಿನದೊಳಗೆ ಅಳವಡಿಸಲು ಸೂಚಿಸಲಾಗಿದೆ. ಮಾಸ್ಟರ್ ಪ್ಲಾನ್ ಯೋಜನೆಯ 68 ಕೋಟಿ ರೂ. ವೆಚ್ಚದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಆಗಸ್ಟ್ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಲಾಗಿದೆ. ದೇವಳದ ಸಿಬ್ಬಂದಿಗೆ ಭದ್ರತಾ ವಿಚಾರವಾಗಿ ತರಬೇತಿ ಆಯೋಜಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

17 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

18 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

18 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

19 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

19 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

19 hours ago