Featured

ದೇವಸ್ಥಾನಗಳನ್ನು ಒಡೆದು ಹಾಕಿ ; ವಿವಾದಿತ ಹೇಳಿಕೆ ನೀಡಿದ ಎಚ್.ಡಿ ರೇವಣ್ಣ

ತಾವು ಏನೇ ಕೆಲಸ ಮಾಡಲಿಕ್ಕಿದ್ದರೂ ಸಹ ಜ್ಯೋತಿಷ್ಯರ, ವಾಸ್ತು ತಜ್ಞರ ಸಲಹೆ ಪಡೆಯೋ, ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಸದಾ ಸುದ್ದಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿಯವರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ.ರೇವಣ್ಣ ಅವರು ಈ ಬಾರಿ ದೇವಸ್ಥಾನಗಳನ್ನು ಕೆಡವುವ ಬಗ್ಗೆ ವಿವಾದಿತ ಹೇಳಿಕೆಯೊಂದನ್ನು ನೀಡಿ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಧಾರವಾಡ ನಗರದ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ನಡೆದ ಪ್ರಾಕೃತಿಕ ವಿಕೋಪ ಹಾಗೂ ಮಳೆಯಿಂದಾಗಿ ಆದ ಹಾನಿ ಪರಿಶೀಲನಾ ಸಭೆಯಲ್ಲಿ ಎಚ್.ಡಿ. ರೇವಣ್ಣ ಅವರು ಹುಬ್ಬಳ್ಳಿ – ಧಾರವಾಡ ನಡುವಿನ ಬಿ.ಆರ್.ಟಿ.ಎಸ್ ಯೋಜನೆಗೆ ದೇವಸ್ಥಾನಗಳು ಅಡ್ಡಿಯಾಗಿದ್ದಲ್ಲಿ ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಒಡೆದು ಹಾಕಿ ಎಂದು ಅಧಿಕಾರಿಗಳಿಗೆ ಸರಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ರೇವಣ್ಣ ಅವರು ಬೇಜವಾಬ್ದಾರಿಯಾಗಿ ಹೇಳಿ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ನನ್ನ ಕೆಲಸ ಏನಿದ್ದರೂ ರೋಡ್ ಮಾಡಿಸೋದು ಮಾತ್ರ –

ಹಲವಾರು ಅಭಿಪ್ರಾಯಗಳು ಕೇಳಿಬರುತ್ತಿದೆ. ಪ್ರತ್ಯೇಕ ಬಜೆಟ್ ಮಂಡನೆ ಬಗ್ಗೆ ಸಿದ್ದರಾಮಯ್ಯನವರ ಹಾಗೂ ಮೈತ್ರಿಕೂಟದ ಹಲವು ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ . ಈಗ ಇದರ ಬಗ್ಗೆ ಲೋಕೋಪಯೋಗಿ ಸಚಿವರಾಗಿರುವ ಎಚ್ ಡಿ ರೇವಣ್ಣ ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದು ಸಮ್ಮಿಶ್ರ ಸರಕಾರದಲ್ಲಿ ಪೂರ್ಣ ಬಜೆಟ್ ಆಗಬೇಕೋ ಬೇಡವೋ ಅಥವಾ ಪೂರಕ ಬಜೆಟ್ ಮಂಡಿಸಬೇಕು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತೀರ್ಮಾನಿಸುತ್ತಾರೆ. ಅದರಲ್ಲಿ ನಾನು ತಲೆ ಹಾಕುವುದಿಲ್ಲ ನನ್ನದೇನಿದ್ದರೂ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಮಾಡುವದಷ್ಟೇ ಕೆಲಸ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ .

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಬಗ್ಗೆ ಹೇಳಿರುವ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಚ್.ಡಿ.ರೇವಣ್ಣ ಅವರು ನನ್ನ ಇಲಾಖೆ ಬಗ್ಗೆ ಮಾತ್ರ ಮಾತನಾಡುತ್ತೇನೆ, ಯಾವ ಬಜೆಟ್ ಬೇಕೆನ್ನುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಪೂರ್ಣ ಬಜೆಟ್ ಅಥವಾ ಪೂರಕ ಬಜೆಟ್ ಬಗ್ಗೆ ಸಲಹೆ ಕೇಳಿದ್ರೆ ಮಾತ್ರ ಅವರಿಗೆ ಹೇಳುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago