ತಾವು ಏನೇ ಕೆಲಸ ಮಾಡಲಿಕ್ಕಿದ್ದರೂ ಸಹ ಜ್ಯೋತಿಷ್ಯರ, ವಾಸ್ತು ತಜ್ಞರ ಸಲಹೆ ಪಡೆಯೋ, ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಸದಾ ಸುದ್ದಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿಯವರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ.ರೇವಣ್ಣ ಅವರು ಈ ಬಾರಿ ದೇವಸ್ಥಾನಗಳನ್ನು ಕೆಡವುವ ಬಗ್ಗೆ ವಿವಾದಿತ ಹೇಳಿಕೆಯೊಂದನ್ನು ನೀಡಿ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಧಾರವಾಡ ನಗರದ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ನಡೆದ ಪ್ರಾಕೃತಿಕ ವಿಕೋಪ ಹಾಗೂ ಮಳೆಯಿಂದಾಗಿ ಆದ ಹಾನಿ ಪರಿಶೀಲನಾ ಸಭೆಯಲ್ಲಿ ಎಚ್.ಡಿ. ರೇವಣ್ಣ ಅವರು ಹುಬ್ಬಳ್ಳಿ – ಧಾರವಾಡ ನಡುವಿನ ಬಿ.ಆರ್.ಟಿ.ಎಸ್ ಯೋಜನೆಗೆ ದೇವಸ್ಥಾನಗಳು ಅಡ್ಡಿಯಾಗಿದ್ದಲ್ಲಿ ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಒಡೆದು ಹಾಕಿ ಎಂದು ಅಧಿಕಾರಿಗಳಿಗೆ ಸರಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ರೇವಣ್ಣ ಅವರು ಬೇಜವಾಬ್ದಾರಿಯಾಗಿ ಹೇಳಿ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ನನ್ನ ಕೆಲಸ ಏನಿದ್ದರೂ ರೋಡ್ ಮಾಡಿಸೋದು ಮಾತ್ರ –
ಹಲವಾರು ಅಭಿಪ್ರಾಯಗಳು ಕೇಳಿಬರುತ್ತಿದೆ. ಪ್ರತ್ಯೇಕ ಬಜೆಟ್ ಮಂಡನೆ ಬಗ್ಗೆ ಸಿದ್ದರಾಮಯ್ಯನವರ ಹಾಗೂ ಮೈತ್ರಿಕೂಟದ ಹಲವು ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ . ಈಗ ಇದರ ಬಗ್ಗೆ ಲೋಕೋಪಯೋಗಿ ಸಚಿವರಾಗಿರುವ ಎಚ್ ಡಿ ರೇವಣ್ಣ ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದು ಸಮ್ಮಿಶ್ರ ಸರಕಾರದಲ್ಲಿ ಪೂರ್ಣ ಬಜೆಟ್ ಆಗಬೇಕೋ ಬೇಡವೋ ಅಥವಾ ಪೂರಕ ಬಜೆಟ್ ಮಂಡಿಸಬೇಕು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತೀರ್ಮಾನಿಸುತ್ತಾರೆ. ಅದರಲ್ಲಿ ನಾನು ತಲೆ ಹಾಕುವುದಿಲ್ಲ ನನ್ನದೇನಿದ್ದರೂ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಮಾಡುವದಷ್ಟೇ ಕೆಲಸ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ .
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಬಗ್ಗೆ ಹೇಳಿರುವ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಚ್.ಡಿ.ರೇವಣ್ಣ ಅವರು ನನ್ನ ಇಲಾಖೆ ಬಗ್ಗೆ ಮಾತ್ರ ಮಾತನಾಡುತ್ತೇನೆ, ಯಾವ ಬಜೆಟ್ ಬೇಕೆನ್ನುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಪೂರ್ಣ ಬಜೆಟ್ ಅಥವಾ ಪೂರಕ ಬಜೆಟ್ ಬಗ್ಗೆ ಸಲಹೆ ಕೇಳಿದ್ರೆ ಮಾತ್ರ ಅವರಿಗೆ ಹೇಳುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…