ದೇವಸ್ಥಾನಗಳಿಗೆ ನೀಡಿದ್ದ ಘಂಟಾನಾದ ಸುತ್ತೋಲೆ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ – Vishwanews24

Featured, ರಾಜ್ಯ ನ್ಯೂಸ್

ದೇವಸ್ಥಾನಗಳಿಗೆ ನೀಡಿದ್ದ ಘಂಟಾನಾದ ಸುತ್ತೋಲೆ ಹಿಂಪಡೆದ ಧಾರ್ಮಿಕ ದತ್ತಿ ಇಲಾಖೆ – Vishwanews24

ಬೆಂಗಳೂರು : ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನ ಬಳಸದಂತೆ ನಿರ್ಬಂಧ ವಿಧಿಸಿದ್ದ ಆದೇಶವನ್ನ ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ವಿಧಾನಸಭೆಯಲ್ಲಿ ಸಿ.ಟಿ.ರವಿ ಹಾಗೂ ರವಿಸುಬ್ರಹ್ಮಣ್ಯ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ‘ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನ ಈಗಾಗಲೇ ಹಿಂಪಡೆಯಲಾಗಿದ್ದು, ಯಾರಿಗೂ ಗೊಂದಲ ಬೇಡ. ಇನ್ನು ಇನ್ನೀದನ್ನ ಯಾವುದೋ ಒಂದು ಧರ್ಮ ಅಥವಾ ಸಮುದಾಯವನ್ನ ಗುರಿಯಾಗಿಟ್ಟುಕೊಂಡು ನೋಟಿಸ್ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನ ಹಿಂಪಡೆಯಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಆಪದ್ಭಾಂದವ ಆಸೀಫ್‌ ಹಲ್ಲೆ ಪ್ರಕರಣ: 6 ಮಂಗಳಮುಖಿಯರು ಅರೆಸ್ಟ್‌ – Vishwanews24

Leave a Reply