Featured

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ರಾಜ್ಯದಲ್ಲಿ ಗೋ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಗೋಶಾಲೆಗಳಿಗೆ ಆರ್ಥಿಕಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಈ ಬಾರಿಯ ಬಜೆಟ್‌ನಲ್ಲಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಭಾರತದ ಸಂಸ್ಕೃತಿಯಲ್ಲಿ ಗೋವುಗಳಿಗೆ ಪ್ರಧಾನ ಪಾತ್ರವಿದೆ. ಹಲವಾರು ಕಾರಣಗಳಿಂದ ಅನಾಥವಾಗುವ ಗೋವುಗಳ ರಕ್ಷಣೆಯ ಸದುದ್ದೇಶದಿಂದ ನಮ್ಮ ರಾಜ್ಯದಲ್ಲಿ ಹಲವಾರು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸರಕಾರ ಗೋ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ, ಗೋಶಾಲೆಗಳು ಆರ್ಥಿಕವಾಗಿ ತೀರ ಸಂಕಷ್ಟ ಪರಿಸ್ಥಿತಿಯಲ್ಲಿ ಗೋರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈಗಾಗಲೇ ಈ ಮಹತ್ವದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಿದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಸರಕಾರ ಪ್ರತಿ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವ ಯೋಜನೆಗೂ ಸಹಕಾರವಾಗಲಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago