Featured

ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಪ್ರವೇಶ ; ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ :ಮುಸ್ಲಿಂ ವ್ಯಾಪಾರಸ್ಥರ ಅಳಲು  – Vishwanews24

ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ,

ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು.

ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ.

ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ

ಮುಸ್ಲಿಂ ವ್ಯಾಪಾರಸ್ಥರ ಅಳಲು

ಮಂಗಳೂರು: ಕರಾವಳಿಯ ಏಳು ಪ್ರಮುಖ ಜಾತ್ರೆಗಳ ಪೈಕಿ ಒಂದಾಗಿರುವ ಕಾಪು ಮಾರಿ ಜಾತ್ರೆ ಸೇರಿದಂತೆ ಮಂಗಳೂರಿನ ಜಾತ್ರೆಯಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇದೀಗ ಭಾರಿ ವಿವಾದ ಸೃಷ್ಟಿಸಿದೆ.

30 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಯುವ ಕಾಪು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಸ್ಥರಿಗೆ ಅಂಗಡಿ ಕೊಡದಿರಲು ನಿರ್ಧರಿಸಲಾಗಿದೆ.

ಹೈಕೋರ್ಟ್‌ ತೀರ್ಪು ನೀಡಿದ ನಂತರವೂ ಹಿಜಾಬ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರಿಗೆ ತಿರುಗೇಟು ಇದು ಎಂದು ಸ್ಥಳೀಯ ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಅದೇ ಇನ್ನೊಂದೆಡೆ, ಮಂಗಳೂರಿನಲ್ಲೂ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಲಿಲ್ಲ. ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಇಲ್ಲಿ ಹಾಕಲಾಗಿದೆ.

ಕಾಪು ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ರಮೇಶ್ ಹೆಗಡೆ, ‘ನಾವು ಯಾವುದೇ ಕಾಯ್ದೆ- ಕಾನೂನು ಉಲ್ಲಂಘನೆ ಮಾಡುತ್ತಿಲ್ಲ. ಮುಜರಾಯಿ ಕಾಯ್ದೆ ನಿಯಮಾವಳಿಯಲ್ಲಿರುವ ಅಂಶವನ್ನೇ ಜಾರಿಗೊಳಿಸಿದ್ದೇವೆ. ದೇವಾಲಯದ ಪರಿಸರದಲ್ಲಿ ಹಿಂದೂಯೇತರರಿಗೆ ಜಾಗ ಗುತ್ತಿಗೆ ನೀಡಲು ಅವಕಾಶವಿಲ್ಲ. ಇದೇ ನಿಯಮಾವಳಿ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದ್ದಾರೆ.ಆಡಳಿತ ಮಂಡಳಿಯ ತೀರ್ಮಾನದಿಂದ ಮಂಗಳೂರಿನ ಮುಸ್ಲಿಂ ವ್ಯಾಪಾರಿಗಳಿಗೆ ಆಘಾತವಾಗಿದೆ. ಪ್ರತಿವರ್ಷ ನೂರಾರು ಮುಸ್ಲಿಂ ವ್ಯಾಪಾರಿಗಳಿಗೆ ಮಾರಿಜಾತ್ರೆ ಆದಾಯ ಒದಗಿಸುತ್ತಿದೆ. ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ, ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು. ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

ಮಂಗಳೂರಿನ ಜಾತ್ರಾ ಜಾಗದಲ್ಲಿ ಬ್ಯಾನರ್‌ನಲ್ಲಿ ಬರೆದಿರುವ ಬರಹಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ‘ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶಿಲ್ದಾರ್ ಜೊತೆ ಮಾತನಾಡಿದ್ದೇವೆ. ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ ಎಂದಿದ್ದಾರೆ. ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

1 hour ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago