Featured

ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಪ್ರವೇಶ ; ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ :ಮುಸ್ಲಿಂ ವ್ಯಾಪಾರಸ್ಥರ ಅಳಲು  – Vishwanews24

ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ,

ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು.

ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ.

ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ

ಮುಸ್ಲಿಂ ವ್ಯಾಪಾರಸ್ಥರ ಅಳಲು

ಮಂಗಳೂರು: ಕರಾವಳಿಯ ಏಳು ಪ್ರಮುಖ ಜಾತ್ರೆಗಳ ಪೈಕಿ ಒಂದಾಗಿರುವ ಕಾಪು ಮಾರಿ ಜಾತ್ರೆ ಸೇರಿದಂತೆ ಮಂಗಳೂರಿನ ಜಾತ್ರೆಯಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇದೀಗ ಭಾರಿ ವಿವಾದ ಸೃಷ್ಟಿಸಿದೆ.

30 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಯುವ ಕಾಪು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಸ್ಥರಿಗೆ ಅಂಗಡಿ ಕೊಡದಿರಲು ನಿರ್ಧರಿಸಲಾಗಿದೆ.

ಹೈಕೋರ್ಟ್‌ ತೀರ್ಪು ನೀಡಿದ ನಂತರವೂ ಹಿಜಾಬ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರಿಗೆ ತಿರುಗೇಟು ಇದು ಎಂದು ಸ್ಥಳೀಯ ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಅದೇ ಇನ್ನೊಂದೆಡೆ, ಮಂಗಳೂರಿನಲ್ಲೂ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಲಿಲ್ಲ. ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಇಲ್ಲಿ ಹಾಕಲಾಗಿದೆ.

ಕಾಪು ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ರಮೇಶ್ ಹೆಗಡೆ, ‘ನಾವು ಯಾವುದೇ ಕಾಯ್ದೆ- ಕಾನೂನು ಉಲ್ಲಂಘನೆ ಮಾಡುತ್ತಿಲ್ಲ. ಮುಜರಾಯಿ ಕಾಯ್ದೆ ನಿಯಮಾವಳಿಯಲ್ಲಿರುವ ಅಂಶವನ್ನೇ ಜಾರಿಗೊಳಿಸಿದ್ದೇವೆ. ದೇವಾಲಯದ ಪರಿಸರದಲ್ಲಿ ಹಿಂದೂಯೇತರರಿಗೆ ಜಾಗ ಗುತ್ತಿಗೆ ನೀಡಲು ಅವಕಾಶವಿಲ್ಲ. ಇದೇ ನಿಯಮಾವಳಿ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದ್ದಾರೆ.ಆಡಳಿತ ಮಂಡಳಿಯ ತೀರ್ಮಾನದಿಂದ ಮಂಗಳೂರಿನ ಮುಸ್ಲಿಂ ವ್ಯಾಪಾರಿಗಳಿಗೆ ಆಘಾತವಾಗಿದೆ. ಪ್ರತಿವರ್ಷ ನೂರಾರು ಮುಸ್ಲಿಂ ವ್ಯಾಪಾರಿಗಳಿಗೆ ಮಾರಿಜಾತ್ರೆ ಆದಾಯ ಒದಗಿಸುತ್ತಿದೆ. ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ, ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು. ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

ಮಂಗಳೂರಿನ ಜಾತ್ರಾ ಜಾಗದಲ್ಲಿ ಬ್ಯಾನರ್‌ನಲ್ಲಿ ಬರೆದಿರುವ ಬರಹಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ‘ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶಿಲ್ದಾರ್ ಜೊತೆ ಮಾತನಾಡಿದ್ದೇವೆ. ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ ಎಂದಿದ್ದಾರೆ. ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago