Featured

ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಪ್ರವೇಶ ; ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ :ಮುಸ್ಲಿಂ ವ್ಯಾಪಾರಸ್ಥರ ಅಳಲು  – Vishwanews24

ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ,

ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು.

ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ.

ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ

ಮುಸ್ಲಿಂ ವ್ಯಾಪಾರಸ್ಥರ ಅಳಲು

ಮಂಗಳೂರು: ಕರಾವಳಿಯ ಏಳು ಪ್ರಮುಖ ಜಾತ್ರೆಗಳ ಪೈಕಿ ಒಂದಾಗಿರುವ ಕಾಪು ಮಾರಿ ಜಾತ್ರೆ ಸೇರಿದಂತೆ ಮಂಗಳೂರಿನ ಜಾತ್ರೆಯಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇದೀಗ ಭಾರಿ ವಿವಾದ ಸೃಷ್ಟಿಸಿದೆ.

30 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಯುವ ಕಾಪು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಸ್ಥರಿಗೆ ಅಂಗಡಿ ಕೊಡದಿರಲು ನಿರ್ಧರಿಸಲಾಗಿದೆ.

ಹೈಕೋರ್ಟ್‌ ತೀರ್ಪು ನೀಡಿದ ನಂತರವೂ ಹಿಜಾಬ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರಿಗೆ ತಿರುಗೇಟು ಇದು ಎಂದು ಸ್ಥಳೀಯ ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಅದೇ ಇನ್ನೊಂದೆಡೆ, ಮಂಗಳೂರಿನಲ್ಲೂ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಲಿಲ್ಲ. ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಇಲ್ಲಿ ಹಾಕಲಾಗಿದೆ.

ಕಾಪು ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ರಮೇಶ್ ಹೆಗಡೆ, ‘ನಾವು ಯಾವುದೇ ಕಾಯ್ದೆ- ಕಾನೂನು ಉಲ್ಲಂಘನೆ ಮಾಡುತ್ತಿಲ್ಲ. ಮುಜರಾಯಿ ಕಾಯ್ದೆ ನಿಯಮಾವಳಿಯಲ್ಲಿರುವ ಅಂಶವನ್ನೇ ಜಾರಿಗೊಳಿಸಿದ್ದೇವೆ. ದೇವಾಲಯದ ಪರಿಸರದಲ್ಲಿ ಹಿಂದೂಯೇತರರಿಗೆ ಜಾಗ ಗುತ್ತಿಗೆ ನೀಡಲು ಅವಕಾಶವಿಲ್ಲ. ಇದೇ ನಿಯಮಾವಳಿ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದ್ದಾರೆ.ಆಡಳಿತ ಮಂಡಳಿಯ ತೀರ್ಮಾನದಿಂದ ಮಂಗಳೂರಿನ ಮುಸ್ಲಿಂ ವ್ಯಾಪಾರಿಗಳಿಗೆ ಆಘಾತವಾಗಿದೆ. ಪ್ರತಿವರ್ಷ ನೂರಾರು ಮುಸ್ಲಿಂ ವ್ಯಾಪಾರಿಗಳಿಗೆ ಮಾರಿಜಾತ್ರೆ ಆದಾಯ ಒದಗಿಸುತ್ತಿದೆ. ನಾವು ಯಾವುದೇ ರೀತಿಯ ಹಿಜಾಬ್‌ ಹೋರಾಟದಲ್ಲಿ ಭಾಗವಹಿಸಿಲ್ಲ, ನಮಗೆ ದೇವಾಲಯದ ಆವರಣದಲ್ಲಿ ಶಾಂತಿ ಪೂರ್ವಕವಾಗಿ ವ್ಯಾಪಾರ ನಡೆಸುತ್ತಿದ್ದೆವು. ನಾವು ಹಿಂದೂಗಳ ಜೊತೆ ಸಾಮರಸ್ಯ ಬಯಸುತ್ತೇವೆ. ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

ಮಂಗಳೂರಿನ ಜಾತ್ರಾ ಜಾಗದಲ್ಲಿ ಬ್ಯಾನರ್‌ನಲ್ಲಿ ಬರೆದಿರುವ ಬರಹಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ‘ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶಿಲ್ದಾರ್ ಜೊತೆ ಮಾತನಾಡಿದ್ದೇವೆ. ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ ಎಂದಿದ್ದಾರೆ. ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

3 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

5 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

5 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

5 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

6 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

6 hours ago