ಬೆಂಗಳೂರು: ದೇವಸ್ಥಾನಗಳ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಲಾಗಿದೆಯೆ ಎಂಬ ಬಗ್ಗೆ ಅಗತ್ಯವಿದ್ದರೆ ತನಿಖೆ ನಡೆಸುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಇಂತಹ ಆರೋಪಗಳು ಕೇಳಿ ಬಂದಿವೆ. ಆದರೆ, ಅನ್ಯ ಕಾರ್ಯಗಳಿಗೆ ಮತ್ತು ಅನ್ಯ ಧರ್ಮಗಳ ಉದ್ದೇಶಗಳಿಗಾಗಿ ಬಳಸಿರುವ ಸಾಧ್ಯತೆ ಇಲ್ಲ , ಆದರೂ ಅಂತಹ ಸಂಶಯಗಳಿಗೆ ಉತ್ತರ ಪಡೆಯಲು ಅಗತ್ಯವಿದ್ದರೆ ತನಿಖೆ ನಡೆಸಲಾಗುವುದು. \ ಎಂದು ಸಚಿವರು ತಿಳಿಸಿದರು.
ಒಂದು ತಿಂಗಳಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮತ್ತು ಎಲ್ಲ ಜಿಲ್ಲೆಗಳ ಧಾರ್ಮಿಕ ಪರಿಷತ್ತನ್ನು ಪುನರ್ ರಚಿಸಲಾಗುವುದು. ದೇವಸ್ಥಾನಗಳಲ್ಲಿ ಶುಚಿತ್ವ ಕಾಪಾಡಬೇಕು, ಎಲ್ಲ ಹಂತಗಳಲ್ಲೂ ಪಾರದರ್ಶಕತೆ ಇರಬೇಕು. ಧಾರ್ಮಿಕ ನಂಬಿಕೆಗಳಿಗೆ ಒತ್ತುಕೊಟ್ಟು ಪರಿಣಾಮಕಾರಿ ಕೆಲಸ ಮಾಡುವಂತಾಗಬೇಕು ಎಂದು ಹೇಳಿದರು.
ಮುಜರಾಯಿ ದೇವಸ್ಥಾನಗಳ ತಸ್ತೀಕ್ ಹಣ ₹27 ಸಾವಿರದಿಂದ ₹48 ಸಾವಿರಕ್ಕೆ ಏರಿಸಲಾಗಿದೆ. ಇನ್ನು ಮುಂದೆ ಈ ಹಣವನ್ನು ಇ ಆಡಳಿತ ಮೂಲಕ ನೇರವಾಗಿ ದೇವಸ್ಥಾನದ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…