ಬೆಂಗಳೂರು : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು, “ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.
“ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.” ಎಂದು ಕಿಡಿ ಕಾರಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…