ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ ಬಿದ್ದು ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ. ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು ಈ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಪಕ್ಕೆಲುಬು ನೋವಿನ ಹಿನ್ನೆಲೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ಎಚ್.ಡಿ.ರೇವಣ್ಣ ಅವರನ್ನು ದಾಖಲು ಮಾಡಲಾಗಿದೆ. ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿದ್ದಾರೆ. ಎಚ್.ಡಿ.ರೇವಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…