Featured

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ -Vishwanews24

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ

ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತ  ..

ನವದೆಹಲಿ : ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

” ದೇವರೇ ಭೂಮಿಯ ಮಾಲೀಕನಾಗಿರುವುದರಿಂದ ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ. ಹೀಗಾಗಿ ಭೂ ದಾಖಲೆಗಳಲ್ಲಿ ಪೂಜಾರಿ ಅಥವಾ ವ್ಯವಸ್ಥಾಪಕರ ಹೆಸರನ್ನು ಉಲ್ಲೇಖಿಸಲೇಬೇಕು ಎಂಬ ಅಗತ್ಯವಿಲ್ಲ. ದೇವರೇ ಭೂಮಿಯ ಸ್ವಾಮ್ಯ ಹೊಂದಿರುವುದರಿಂದ ದೇವರ ಸೇವಕರಾಗಿರುವವರು ಅಥವಾ ವ್ಯವಸ್ಥಾಪಕರು ಅದನ್ನು ಅನುಭೋಗಿಸುತ್ತಾರೆ ಅಷ್ಟೇ” ಎಂದು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಮತ್ತು ಎ ಎಸ್‌ ಬೋಪಣ್ಣ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮಧ್ಯಪ್ರದೇಶ ಕಂದಾಯ ಕಾನೂನು ಸಂಹಿತೆ 1959ರ ಅಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳ ವಿಚಾರಣೆಯನ್ನು ಪೀಠ ನಡೆಸಿತು.

ಕಾನೂನುಬಾಹಿರವಾಗಿ ಪೂಜಾರಿಗಳು ದೇವಸ್ಥಾನದ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಭೂ ದಾಖಲೆಯಲ್ಲಿ ಪೂಜಾರಿಗಳ ಹೆಸರನ್ನು ತೆಗೆದು ಹಾಕುವ ಸಂಬಂಧ ಸರ್ಕಾರವು ಕಾರ್ಯಕಾರಿ ಸೂಚನೆಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿತ್ತು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago