Featured

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ -Vishwanews24

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ

ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತ  ..

ನವದೆಹಲಿ : ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

” ದೇವರೇ ಭೂಮಿಯ ಮಾಲೀಕನಾಗಿರುವುದರಿಂದ ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ. ಹೀಗಾಗಿ ಭೂ ದಾಖಲೆಗಳಲ್ಲಿ ಪೂಜಾರಿ ಅಥವಾ ವ್ಯವಸ್ಥಾಪಕರ ಹೆಸರನ್ನು ಉಲ್ಲೇಖಿಸಲೇಬೇಕು ಎಂಬ ಅಗತ್ಯವಿಲ್ಲ. ದೇವರೇ ಭೂಮಿಯ ಸ್ವಾಮ್ಯ ಹೊಂದಿರುವುದರಿಂದ ದೇವರ ಸೇವಕರಾಗಿರುವವರು ಅಥವಾ ವ್ಯವಸ್ಥಾಪಕರು ಅದನ್ನು ಅನುಭೋಗಿಸುತ್ತಾರೆ ಅಷ್ಟೇ” ಎಂದು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಮತ್ತು ಎ ಎಸ್‌ ಬೋಪಣ್ಣ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮಧ್ಯಪ್ರದೇಶ ಕಂದಾಯ ಕಾನೂನು ಸಂಹಿತೆ 1959ರ ಅಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳ ವಿಚಾರಣೆಯನ್ನು ಪೀಠ ನಡೆಸಿತು.

ಕಾನೂನುಬಾಹಿರವಾಗಿ ಪೂಜಾರಿಗಳು ದೇವಸ್ಥಾನದ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಭೂ ದಾಖಲೆಯಲ್ಲಿ ಪೂಜಾರಿಗಳ ಹೆಸರನ್ನು ತೆಗೆದು ಹಾಕುವ ಸಂಬಂಧ ಸರ್ಕಾರವು ಕಾರ್ಯಕಾರಿ ಸೂಚನೆಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿತ್ತು.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

36 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago